ಈ ಪುಟವನ್ನು ಪ್ರಕಟಿಸಲಾಗಿದೆ
ಹವ್ಯಾಸೀ ಯಕ್ಷಗಾನ ಸಂಘಗಳು / ೫೯

ಕೊಡುವ ಮೂಲಕ ಆ ಕಲೆಯ ಉದ್ಧಾರಕ್ಕೆ ಶ್ರಮಿಸತಕ್ಕದ್ದು.
6. ಬೇರೆ ಬೇರೆ ಹವ್ಯಾಸೀ ಸಂಘಗಳ ಕಲಾವಿದರಿಂದ ಪ್ರದರ್ಶನಗಳ ನ್ನು ಏರ್ಪಡಿಸಿ ಸಂಘಗಳೊಳಗೆ ಸಹಕಾರ ವರ್ಧನೆ ಹಾಗೂ ಹೊಸ ಕಲಾವಿದರ ಶೋಧನಾ ಕಾರ್ಯ ನಡೆಯಬೇಕು. ಬಂಟ್ವಾಳದ “ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ಯಕ್ಷಗಾನ ಮಂಡಳಿ”ಯು ಈ ನಿಟ್ಟಿನಲ್ಲಿ ಶ್ರಾವಣ ಮಾಸದ ಕೂಟಗಳ ಮೂಲಕ ಈ ಕಾರ್ಯ ಮಾಡುತ್ತಿರುವುದು ಸ್ತುತ್ಯರ್ಹ.


ಯಕ್ಷಗಾನ ಕಲಾಕ್ಷೇತ್ರ (ರಿ) ಸಿರಿಬೀಡು ಉಡುಪಿ, - ಇವರ ವಿಚಾರಗೋಷ್ಠಿಯಲ್ಲಿ ಮಂಡಿಸಿದ
ಪ್ರಬಂಧ, 21.3.1976 ಉಡುಪಿಯ ರಾಯಭಾರಿ ಯಲ್ಲಿ ಪ್ರಕಟಿತ.