ಈ ಪುಟವನ್ನು ಪ್ರಕಟಿಸಲಾಗಿದೆ
ಯಕ್ಷಗಾನ - ಸಾಹಿತ್ಯ ಮಾಧ್ಯಮ ೬೩

ಸಂವಹಿಸುತ್ತದೆ; ಅರ್ಥಗಾರಿಕೆಯಲ್ಲಿ.
ಯಕ್ಷಗಾನ ಪ್ರಸಂಗ ಸಾಹಿತ್ಯ ಇಡಿಯ ಪ್ರದರ್ಶನದ ಆಧಾರ, ಹಾಗಾಗಿ ಯಕ್ಷಗಾನದ ವಸ್ತು, ಆಶಯ ಮತ್ತು ಚಿತ್ರಣದ ವೈವಿಧ್ಯ ಮತ್ತು ಕಲೆಗಾರಿಕೆ - ಇವುಗಳ ಗರಿಷ್ಠ ಸಾಧ್ಯತೆಯ ಮೂಲ ಪ್ರಸಂಗ ರಚನೆಯೇ, ಪ್ರಸಂಗದ ಸಾಹಿತ್ಯದ ಹರಹು ದೊಡ್ಡದು. ಪೌರಾಣಿಕ, ಜಾನಪದ, ಕಾಲ್ಪನಿಕ, ಕ್ಷೇತ್ರ ಪುರಾಣ ಹೀಗೆ ಹಲವು ಮೂಲದ ವಸ್ತುಗಳು ಇಲ್ಲಿ ಪ್ರಯೋಗಗೊಂಡಿವೆ.
ಪ್ರಸಂಗ ಸಾಹಿತ್ಯವನ್ನು ಅವಲೋಕಿಸುವಾಗ ಮುಖ್ಯವಾಗಿ ಗಮನಿಸ ಬೇಕಾದ ಅಂಶವೆಂದರೆ, ಅದು ರಂಗಸಾಹಿತ್ಯವೆಂಬುದು. ಪ್ರಸಂಗದ ಪದ್ಯಗಳು, ಗಾನಕ್ಕೆ, ಲಯಕ್ಕೆ, ನೃತ್ಯಕ್ಕೆ ಒದಗುವ ಗೇಯ ರಚನೆಗಳಾಗಬೇಕು. ಶುದ್ದ ಕಾವ್ಯ ವನ್ನು ರಚಿಸುವ ಕವಿಗೆ ಇರುವ ಸ್ವಾತಂತ್ರ್ಯ ಯಕ್ಷಗಾನ ಕವಿಗೆ ಇಲ್ಲ. ರಚನೆ ಸರಳ ವಾಗಿ, ಅರ್ಥಹೇಳುವುದಕ್ಕೆ ಅವಕಾಶವನ್ನೂ ನೆಲೆಯನ್ನೂ ಒದಗಿಸುವಂತೆಯೂ ಇರ ಬೇಕಾಗುತ್ತದೆ. ಮಾತುಗಾರಿಕೆಯ ರೀತಿ ಗತಿಗಳ ಮೇಲೆ ವೇಷ, ನೃತ್ಯ, ಹಿಮ್ಮೇಳ ಗಳ ಆವರಣ ಹೊರಿಸುವ ಮಿತಿ ಇದ್ದಂತೆ, ಪ್ರಸಂಗ ರಚನೆ ಯ ಮೇಲೂ, ಈ ಮಾಧ್ಯಮದ ಒಟ್ಟು ಸ್ವರೂಪ ನಿರ್ಬಂಧ ಹೇರುತ್ತದೆ.
ಈ ಮಿತಿಯನ್ನು ಉಳಿಸಿ ಯಕ್ಷಗಾನ ಮಾಧ್ಯಮಕ್ಕೆ ಸಂಗತವಾಗಿ, ಕಥೆಯ ವಿನ್ಯಾಸದಲ್ಲಿ, ಆಶಯದಲ್ಲಿ ಹೊಸ ಆವಿಷ್ಕಾರಗಳನ್ನು ತಂದು ನವಿನ ಸಂಘರ್ಷ ವಿನ್ಯಾಸಗಳನ್ನು ಮಂಡಿಸುವ ಪ್ರಯತ್ನಗಳು ನಡೆದಿವೆ. ಅಮೃತ ಸೋಮೇಶ್ವರ, ಗುಂಡೂ ಸೀತಾರಾಮ್ ರಾವ್, ರಾಘವ ನಂಬಿಯಾರ್ ಮುಂತಾದ ಕವಿಗಳ ಪ್ರಸಂಗ ರಚನೆ ಇಂತಹ ಯತ್ನಗಳನ್ನು ತೋರುತ್ತದೆ. 'ಹೊಸ ಪ್ರಸಂಗ' ಎಂದೊಡನೆ ಮಗು ಮುರಿಯುವ ಪ್ರವೃತ್ತಿ ಕೆಲವು ಸಲ ಕಂಡು ಬರುತ್ತಿದೆ. ಆದರೆ ಸ್ಥಿತಿ ಹಾಗಲ್ಲ. ಹಾಗೆ ನೋಡಿದರೆ, ಇಂದಿನ ಸಾಧಾರಣ ದರ್ಜೆಯ ಯಕ್ಷಗಾನ ಕವಿ ಕೂಡಾ. ರಂಗದೃಷ್ಟಿಯನ್ನು ಅಳವಡಿಸಿ ಪ್ರಸಂಗ ರಚನೆ ಮಾಡುವುದನ್ನು ನಾವು ನೋಡು ತ್ತೇವೆ.



ತಾಯಿನುಡಿ' - ದೀಪಾವಳಿ ಸಂಚಿಕೆ ೧೯೮೨,