ಈ ಪುಟವನ್ನು ಪ್ರಕಟಿಸಲಾಗಿದೆ

೬೬ / ಜಾಗರ
ಮಿತಿಯಲ್ಲಿ ಸೊಗಸಾಗಿ ಅರ್ಥಹೇಳುತ್ತಾನೆಂದು ಇಟ್ಟುಕೊಳ್ಳಿ. ಆಗ ಅವನೊಂದಿಗೆ ಮೂಲ ಕಾವ್ಯದ ಆಧಾರದಿಂದ ಸಂವಾದವನ್ನು ರೂಪಿಸಲು ಯತ್ನಿಸಿದರೆ ತಾಳ ಮದ್ದಳೆಯ ಸಮತೋಲ ತಪ್ಪಿಹೋಗಬಹುದು. ಆಗ ನಾವು ಪಾತ್ರ-ಚಿತ್ರಣದ ಬಗೆಗೆ ನಮ್ಮ ಉದ್ದೇಶದಲ್ಲಿಯ ಬದಲಾವಣೆಗೆ ಸಿದ್ಧರಾಗಬೇಕಾದುದೇ ಸರಿ,
ಒಂದು ಸನ್ನಿವೇಶದಲ್ಲಿ ಎರಡು ಪಾತ್ರಗಳ ಒಳಗಿನ ಸಂವಾದ, ಉದಾ: ವಾಲಿ-ರಾಮರ ಸಂಭಾಷಣೆಯಲ್ಲಿ ವಾಲಿಯ ಶರಣಾಗತಿ ಯ ಸಂದರ್ಭ ಎಂದಿಟ್ಟು ಕೊಳ್ಳೋಣ. ಆಗ ವಾಲಿ ತನ್ನ ಶರಣಾಗತಿಗೆ ಪೋಷಕವಾಗಿ, ಸಮುದ್ರಮಥನ ದಲ್ಲಿಯ ವಾಲಿ-ವಿಷ್ಣು ಪ್ರಕರಣವನ್ನು, ಅಂದೇ ನಿನಗೆ ಈ ಜೀವ ಕೊಡಲ್ಪಟ್ಟು ಮುಡಿಪಾಗಿಸಿದ್ದಲ್ಲವೆ ಸ್ವಾಮಿ?” - ಎನ್ನುತ್ತಾನೆ. (ಅಥವಾ ರಾಮನೇ ಈ ಕಥೆಯ ಸೂಚನೆ ಕೊಡುತ್ತಾನೆ ಎನ್ನೋಣ) ಆಗ ಈ ಕಥೆಯ ನ್ನು ಇಲ್ಲಿ ತಂದು ರಾಮನ ದೇವತ್ವವನ್ನು ವಾಚ್ಯಗೊಳಿಸಲಾಗದು ಎಂಬುದೇ ನಮ್ಮ ಉದ್ದೇಶ ಇದ್ದರೂ, ಇಲ್ಲ, ಅದು ಹಾಗಲ್ಲ,' ಎಂಬಂತೆ ಮಾತಾಡುವುದು ಸರಿಯಾಗದು. ಇಂತಹ ಸಂದರ್ಭದಲ್ಲಿ ನಮ್ಮ ಪಾತ್ರಚಿತ್ರಣದ ಯೋಜನೆಯನ್ನು ಬದಿಗೊತ್ತಿ ಇದಿರಾಳಿಯ ಧೋರಣೆಗೆ ಅನುಕೂಲವಾಗಿ ಮಾತಾಡದಿದ್ದರೆ ಸನ್ನಿವೇಶದ ನಾಟಕೀಯತೆ ಕೆಡು ವುದು.
ಇನ್ನೊಬ್ಬ ಪಾತ್ರಧಾರಿಗೆ ನಾವು ಹೇಳಿದ ಮಾತಿನ ಅರ್ಥ ಸರಿಯಾಗಿ ಮಂದಟ್ಟಾಗಲಿಲ್ಲ ಎಂದಿಟ್ಟುಕೊಳ್ಳಿ. (ಇದಕ್ಕೆ, ನಮ್ಮ ಮಾತಿನ ಅಪೂಣ೯ತೆ ಹಾಗೂ ಇತರ ಕಾರಣಗಳಿರಬಹುದು) ಆಗ ನಮ್ಮ ಮಾತನ್ನು ನಾವು ಸಾವಧಾನ ವಾಗಿ ವಿವರಿಸಿ, ಸ್ಪಷ್ಟಪಡಿಸಬೇಕಾಗುವುದು. ನಮ್ಮದು ಖಳನಾಯಕನ ಪಾತ್ರ ವಾದರೆ (ಬಕಾಸುರನೆ, ರಾವಣನೋ ಎಂದಿಟ್ಟುಕೊಳ್ಳಿ) ಈ ರೀತಿಯ ಸಾವಧಾನ • ವಿವರಣೆ ಆ ಪಾತ್ರವನ್ನು ಆ ವರೆಗೆ ನಾವು ಚಿತ್ರಿಸಿದ ರೀತಿಗೆ ವಿರುದ್ಧ ಆಗಬಹುದು. ಅವಸರವಾಗಿ, ವಿವರಿಸುವ ತಾಳ್ಮೆಯಿಲ್ಲದ, ಒಬ್ಬ ವ್ಯಕ್ತಿಯಾಗಿ ಚಿತ್ರಿಸಿದ ನಮ್ಮ ಪಾತ್ರ, ಈ ಕ್ಷಣಕ್ಕೆ ತನ್ನ ಸ್ವಭಾವವನ್ನು ಬದಲಾಯಿಸಿ, ವಿವರಣೆ ನೀಡುವುದು ಅರ್ಥಗಾರಿಕೆಯಲ್ಲಿನ ಅನಿವಾರ್ಯ ಅಂಶವಾಗಿದೆ.
ಕೆಲವು ಪಾತ್ರಗಳಿಗೆ ಎದಿರಾಳಿಯ ಪ್ರಶ್ನೆಗಳಿಗೆಲ್ಲ ಉತ್ತರಿಸದಿರುವುದೇ ಒಂದು ಪರಿಣಾಮಕಾರಿ ಚಿತ್ರಣ ಆಗಬಹುದು. ಏಕೆಂದರೆ, ಪ್ರಶ್ನೆಗಳಿಗೆ ಸಮ ರ್ಪಕವಾಗಿ ಉತ್ತರಿಸದೆ ತಪ್ಪಿಸುವ ಜಾಣತನವೂ, ಒರಟು, ಅಸಮರ್ಪಕ ಹಾಗೂ ಕೆಲವೊಮ್ಮೆ ವಕ್ರವಾದ ಉತ್ತರವನ್ನೂ ನೀಡುವಂತಹ ಜಾಣ್ಮೆಯೂ ಖಳಪಾತ್ರಕ್ಕೆ ತಕ್ಕುದಲ್ಲವೆ! (ಇಂತಹ ವೇಳೆ ಅದು ಮಾತ್ರ ಕಲಾಧರ್ಮಕ್ಕನುಗುಣವಾಗಿರಬೇಕು.) ಹೀಗಿರುವಾಗ ಸಮಗ್ರ ಖಂಡನೆ-ಮಂಡನದಲ್ಲಿ ತೊಡಗಿ ಮಾತನಾಡುವುದು, ಪಾತ್ರದ ಒಟ್ಟು ನಿಲುವಿಗೆ ಬಾಧಕವಾಗಬಲ್ಲುದು. ಇದೇ ಮಾತು ರಾಮ ಕೃಷ್ಣರಂತಹ