ಈ ಪುಟವನ್ನು ಪ್ರಕಟಿಸಲಾಗಿದೆ

೬೮ / ಜಾಗರ
ಬರಹದಲ್ಲಿರುವ ತಟಸ್ಥಭಾವ' ಮಾತಿಗೆ ಇಲ್ಲ. ಮಾತು ಅತ್ಯಂತ ಜೀವಂತ ಮಾಧ್ಯಮ. ಮಾತಿನ ವ್ಯಂಗ್ಯ, ವಿವಿಧಾರ್ಥಗಳು, ಶ್ಲೇಷೆಗಳು- ಕೇವಲ ಅಲ್ಲಿಯ ಪದಗಳನ್ನು ಆಧರಿಸದೆ ಸ್ವರವನ್ನು ಆಶ್ರಯಿಸಿ ಹೋಗುತ್ತವೆ. ಹಾಗೆಯೇ ಒಂದು ಪಾತ್ರವು ನೇರವಾಗಿ, ಸರಳವಾಗಿ ಆಡಿದ ಮಾತಿಗೆ ಇನ್ನೊಂದು ಪಾತ್ರವು ಶ್ರೇಷೆ ಯನ್ನು ಆರೋಪಿಸಿ ಅರ್ಥವಿಸಿದಾಗ ಈ ಎರಡರ ಒಟ್ಟು ಪರಿಣಾಮದಲ್ಲಿ ಪಾತ್ರ ಸೃಷ್ಟಿಯ ರೂಪ ನಿರ್ಧರಿಸಲ್ಪಡುತ್ತದೆ. ಹಾಗಾಗಿ ಕಾವ್ಯದ ನೆಲೆಯಲ್ಲಿ ಗಂಭೀರ ವಾಗಿ ಸರಳವಾಗಿ ಇರುವ ಒಂದು ಪಾತ್ರ ಮಾತಿನಲ್ಲಿ ಸ್ವಭಾವದಲ್ಲಿ ಒಂದಷ್ಟು ವ್ಯತ್ಯಾಸ ತೋರಬಹುದು.
ಸಹಪಾತ್ರದ ಮಾತಿಗೆ ಪ್ರತಿಕ್ರಿಯೆ ಕೊಡುವ ಒಂದು ಹೊಣೆಗಾರಿಕೆಯು ಪಾತ್ರಚಿತ್ರಣವನ್ನು ವ್ಯತ್ಯಾಸವನ್ನುಂಟುಮಾಡುತ್ತದೆ ಎ೦ದರೆ ವಿಚಿತ್ರ ಅನಿಸ ಬಹುದು. ಕೆಲವು ಸಲ ಒಂದು ಪಾತ್ರದ ಮಾತಿನ ಪರಿಣಾಮ ಸ್ಪಷ್ಟವಾಗುವುದು ಇನ್ನೊಬ್ಬನು ಅದಕ್ಕೆ ತೋರಿದ ಪ್ರತಿಕ್ರಿಯೆಯಿಂದಾಗಿ, ಇದಿರಾಳಿ ಯ ಮಾತು ಜಳ್ಳಾಗಿ, ಸೊರಗಿಹೋಗದಂತೆ, ಅದಕ್ಕೆ ಪ್ರತಿಕ್ರಿಯೆ ತೋರುತ್ತಾ, ಸಂವಾದ ಸ್ವಾರಸ್ಯ ಉಳಿಸುತ್ತಾ ಹೋಗುವಾಗ ಕೇವಲ ನಮ್ಮ ಕಲ್ಪನೆಯ ಅಥವಾ ಸರಳವಾದ ಪಾತ್ರಸ್ವಭಾವವನ್ನೇ ಗಮನಿಸಿ, ಮುಂದುವರಿಯಲು ಅಸಾಧ್ಯ. ಹೀಗಾಗಿ ಆ ಪಾತ್ರವು ಆ ಸ್ವಭಾವವನ್ನು ಹೊಂದಬಹುದೆ? -ಎಂಬ ಪ್ರಶ್ನೆಗೆ, ಸಂವಾದದ ರೀತಿ ಕ್ರಿಯೆ - ಪ್ರತಿಕ್ರಿಯೆಗಳ ಒಟ್ಟು ಸಂದರ್ಭದಲ್ಲಿ ಉತ್ತರವನ್ನು ಕಂಡುಕೊಳ್ಳಬೇಕಾ ಗುತ್ತದೆ. ರಾಮನು ಗಂಭೀರನೆಂದುಕೊಂಡು, ಶೂರ್ಪಣಖಿಯಲ್ಲೋ, ಸುಗ್ರೀವ ನಲ್ಲೋ, ಮಾತಿಗೆ ತಕ್ಕ ಪ್ರತಿಕ್ರಿಯೆ ತೋರದೆ, ಮೌನವಾಗಿದ್ದರೆ, ನಾಟಕೀಯ ಪರಿಣಾಮ ಸಿದ್ದಿಸದು.
ಈ ಮೇಲೆ ಹೇಳಿದ್ದು, ಒಂದು ಪಾತ್ರವು ತನ್ನ ಮಾತಿನಲ್ಲಿ, ಇನ್ನೊಂದ ರಿಂದ ಹೇಗೆ ಚಿತ್ರಣದಲ್ಲಿ ನಿಯಂತ್ರಣಕ್ಕೆ ಒಳಗಾಗಬೇಕು ಎಂಬುದಕ್ಕೆ ಸಂಬಂಧಿಸಿದ್ದು, ಇನ್ನೊಂದು ರೀತಿಯಲ್ಲೂ, ಒಂದು ಪಾತ್ರವು ಇನ್ನೊಂದು ಪಾತ್ರವನ್ನು ಚಿತ್ರಿಸುತ್ತ ಹೋಗುತ್ತದೆ. ಪದ್ಯಕ್ಕೆ ಅರ್ಥವಿಸುವಾಗಲೂ, ಸಂವಾದದ ತುಂಡುಗಳಲ್ಲೂ ಒಂದು ಪಾತ್ರ ರಂಗದಲ್ಲಿಲ್ಲದಾಗ, ರಂಗದಲ್ಲಿರುವ ಎರಡು ಪಾತ್ರಗಳು ಅದನ್ನು ಚಿತ್ರಿ ಸುತ್ತವೆ. ಸಂವಾದದಲ್ಲಿ ಬರುವ ಉಲ್ಲೇಖಗಳಿಂದಲೂ ಚಿತ್ರಣ ಮಾಡಬಹುದಾಗಿದೆ. (ಉದಾ : ರಾಮ - ಸುಗ್ರೀವರ ಸಂವಾದದಲ್ಲಿ ವಾಲಿಯ ಕುರಿತು; ಕೃಷ್ಣ - ಧರ್ಮ ರಾಜರ ಸಂವಾದದಲ್ಲಿ ಕೌರವನ ಕುರಿತು ಹಾಗೆಯೇ ಇದಿರು ಪಾತ್ರವನ್ನು ಕೂಡಾ ಚಿತ್ರಿಸುತ್ತ ಮಾತಾಡುವುದೂ, ಉಳಿದ ಪಾತ್ರಗಳ ಶೀಲ, ಸ್ವಭಾವ, ಕ್ರಿಯೆಗಳನ್ನು ಗಮನಿಸಿ, ಧ್ವನಿಗೂಡಿಸುತ್ತಾ ಹೋಗುವುದೂ ಅರ್ಥಗಾರಿಕೆಗೆ ಮುಖ್ಯ. ಕೆಲವೊಮ್ಮೆ ಒಂದು ಪಾತ್ರವು ಇನ್ನೊಂದು ಪಾತ್ರದ ಬರುವಿಕೆ, ಭಂಗಿ, ಮುಂತಾದುವನ್ನಷ್ಟೇ