ಈ ಪುಟವನ್ನು ಪ್ರಕಟಿಸಲಾಗಿದೆ
ಪಾತ್ರ-ಚಿತ್ರಣ

ಚಿತ್ರಿಸಿದರೆ ಸಾಕು, ಆದರಿಂದಲೇ ಸಂಬಂಧಿಸಿದ ಆ ಎರಡನೆಯ ಪಾತ್ರವು ಹೇಗಿದೆ ಎಂಬುದು ನಮ್ಮ ಗಮನಕ್ಕೆ ಬರುವುದು. ಈ ಸಂದರ್ಭದಲ್ಲಿ ಸಹಪಾತ್ರವು ಮಾಡಿದ ವರ್ಣನೆಯಿಂದ ಚಿತ್ರಣಕ್ಕೆ ಅನುಕೂಲವಾಗಿ ನಾವು ಮುಂದುವರಿಯಬೇಕು.
ಪಾತ್ರ ಚಿತ್ರಣ ಮಾಡುವಾಗ ಕೇವಲ ಸಂಪ್ರದಾಯಬದ್ಧ, ಕಪ್ಪು- ಬಿಳುಪು ವರ್ಗೀಕರಣದ ರೀತಿಗೊಳಗಾಗದೆ ಪಾತ್ರದ ಒಳಸ್ವಭಾವ, ದ್ವಂದ್ವ, ಸ೦ಘರ್ಷ ಗಳನ್ನೂ ಚಿತ್ರಿಸುತ್ತ ಹೋಗಬೇಕು. (ಮೂಲ ರಾಮಾಯಣ, ಮೂಲ ಭಾರತಗಳಲ್ಲಿ ಲ್ಲಿರುವ ಈ ಮನೋಧರ್ಮವು ನಂತರದ ಕಾವ್ಯ-ಪ್ರಸಂಗಗಳಲ್ಲಿ ಕಡಿಮೆ. ಅಂತಹ ಪ್ರಯೋಗವು ಅರ್ಥಗಾರಿಕೆಯ ಕ್ಷೇತ್ರವನ್ನು ಶ್ರೀಮಂತಗೊಳಿಸಬಲ್ಲುದು. ಪೌರಾ ಣಿಕ ಪಾತ್ರಗಳಿಗೆ, ಹೊಸ ಹೊಸ ಶೋಧನೆಗಳಿಗೆ ಚಿಂತನಗಳು ನಡೆಯಬೇಕು. ಆಧು ನಿಕ ಚಿಂತನ, ವಿವಿಧ ಸಾಹಿತ್ಯ, ಕಾವ್ಯ ಹಾಗೂ ಲೋಕಾನುಭವಗಳನ್ನು ಪಾತ್ರ ಸೃಷ್ಟಿಗೆ ಅಳವಡಿಸುವುದು ತಪ್ಪಲ್ಲ. ಆದರೆ ಹಾಗೆ ಮಾಡುವಾಗ ಯಕ್ಷಗಾನದ ಆವ ರಣಕ್ಕೂ ಪಾತ್ರದ ಶಿಲ್ಪಕ್ಕೂ, ಸಮಗ್ರತೆಗೂ ಭಂಗವಾಗದಂತೆ, ಅರ್ಥಗಾರಿಕೆಯಲ್ಲಿ ಅದು ಎರವಾಗುವಂತೆ ತರಬೇಕು, ಸಮಕಾಲೀನ ಚಿಂತನ, ಧ್ವನಿ, ಸಹಜವಾಗಿ ಮೂಡಬೇಕು. ಅದು ತೇಪೆ ಆಗಬಾರದು. ಪದಪ್ರಯೋಗ, ವಿಚಾರಗಳ ಅಭಿವ್ಯಕ್ತಿ ಯಲ್ಲಿ ಎಚ್ಚರ ಇಲ್ಲವಾದರೆ ಇಂತಹ ಪ್ರಯತ್ನ ಆಭಾಸಕರವಾದೀತು.
ಒಂದು ಪಾತ್ರ ಒಂದು ಸನ್ನಿವೇಶದಲ್ಲಿ ಪದ್ಯಗಳ ಬಗ್ಗೆ ವಹಿಸುವ ನಿಲುವಿ ನಿಂದಾಗಿ, ಸದ್ರಿ, ಪಾತ್ರ ಚಿತ್ರಣದಲ್ಲಿ ವ್ಯತ್ಯಾಸವನ್ನೂ ತರಬಲ್ಲುದು. ಉದಾ: 'ಶರಸೇತು ಬಂಧನ'ದಲ್ಲಿ ಹನುಮ ನೀನೆಂದೆಂಬೆ ತನುವ ನೋಡಿದರೆ, ಬಡಜಣಗಿ ನಂದದೊಳಿರುವೆಯೇಕೆ? ” – ಎಂಬ ಪದ ಸಾಲುಗಳಿಗೆ - ಅದೊಂದು ವ್ಯಂಗ್ಯ, ಮೂದಲಿಕೆ ಎಂದೂ ಅರ್ಥವಿಸಬಹುದಾಗಿದೆ. ಆಶ್ಚರ್ಯ ಕುತೂಹಲ ಯುಕ್ತ ಎಂದೂ ಅರ್ಥವಿಸಬಹುದು. ಇವೆರಡಕ್ಕೂ ಔಚಿತ್ಯ ಇದೆ. ಈ ಎರಡು ರೀತಿ ಗಳಲ್ಲಿ ಅರ್ಜುನನ ಪಾತ್ರ - ಚಿತ್ರಣದಲ್ಲಿ ಎಷ್ಟೊಂದು ವ್ಯತ್ಯಾಸ ಬರುತ್ತದೆ! ಹಾಗೆಯೇ ಅದೇ 'ಶರಸೇತು ಬಂಧನ'ದಲ್ಲಿ, ಅರ್ಜುನ, “ಪೊತ್ತುದಣಿಯಲದೇಕೆ ಗಿರಿಗಳ... ಎಂಬುದನ್ನೂ ಎರಡು ರೀತಿಗಳಲ್ಲಿ ಭಾವಿಸಬಹುದು.
ಪಾತ್ರಗಳ ಭಾವ, ದು:ಖ ಸಂತೋಷ, ಸಿಟ್ಟು, ನಿರಾಶೆ ಹಾಗೂ ಛಲ ಇತ್ಯಾದಿಗಳನ್ನು ಅಭಿವ್ಯಕ್ತಪಡಿಸುವಾಗ ಬೇರೆ ಬೇರೆ ಪಾತ್ರಗಳ ಯೋಗ್ಯತೆ ಹಾಗೂ ಸ್ವಭಾವಗಳಿಗೆ ಅನುಗುಣವಾಗಿ ಪ್ರಕಟಿಸಬೇಕಾಗುತ್ತದೆ. ಧರ್ಮರಾಜನ ದು:ಖ ಬೇರೆ; ರಾಮನ ದು:ಖ ಬೇರೆ; ಚಂದ್ರಮತಿಯ ದು:ಖ ಬೇರೆ, ಹಾಗೆಯೇ ಇತರ ಭಾವಗಳೂ ಬೇರೆ ಬೇರೆಯೇ, ಕೌರವನಂತಹ ಪಾತ್ರ ಗೋಳೋ ಎಂದು ಅಳಬಾ ರದು. ಧರ್ಮರಾಜನೆ, ರಾಮನೆ, ಸಂತೋಷಗೊಂಡರೆ ಅದನ್ನು ಅತ್ಯುತ್ಸಾ ಹದಿಂದ ತೋರ್ಪಡಿಸಬಾರದು. ಯಾವುದೇ ಭಾವದ ಅಭಿವ್ಯಕ್ತಿಯು, ಆಯಾ