ಈ ಪುಟವನ್ನು ಪ್ರಕಟಿಸಲಾಗಿದೆ

೭೮ | ಜಾಗರ
ಎಲ್ಲ ಪಾತ್ರಗಳೂ, ವಸ್ತುಗಳೂ ಆಗಿರುತ್ತಾನೆ. ಯಕ್ಷಗಾನ ಅಥವಾ ಒಂದು ನೃತ್ಯ ನಾಟಕದಲ್ಲಿ ಒಂದು ವಿಶಿಷ್ಟ ಪಾತ್ರವಾಗಿರುವಾಗ, ಇತರ ಪಾತ್ರಗಳು ಅಲ್ಲಿರುವಾಗ ಪಾತ್ರದ ಗುಣ ಸ್ವಭಾವ ಅಂತಸ್ತು ಸನ್ನಿವೇಶ ಇವನ್ನೆಲ್ಲ ಗಣಿಸಿದಾಗ ಅಭಿನಯತಂತ್ರ ಬೇರೆಯೇ ಆಗುತ್ತದೆ.
ಅಭಿನಯವು ಸಫಲವಾಗಬೇಕಾದರೆ, ಭಾಗವತ ಮತ್ತು ವಾದಕರು ನಿಷ್ಟಾ ತರೂ ಸಾಹಿತ್ಯಜ್ಞರೂ ಇರಬೇಕು. ಇಲ್ಲವಾದರೆ, ಅಭಿನಯವೇ ಸಾಧ್ಯವಿಲ್ಲ. ವೇಷ ಧಾರಿಯನ್ನು ಹೆಜ್ಜೆ ಹೆಜ್ಜೆ ಅನುಸರಿಸುವುದಲ್ಲದೆ, ಅವನಲ್ಲಿ ನೂತನ ಕಲ್ಪನೆಗಳನ್ನು ಮೂಡಿಸಲೂ ಭಾಗವತನಿಗೆ ಸಾಧ್ಯ, ಅಭಿನಯ ಮಾಡುವ ವೇಷಧಾರಿಗಳಿದ್ದಾಗ ಪದ್ಯವನ್ನು ಬೇಕಾದಲ್ಲಿ ವಿಭಜಿಸಿ, ಭಾವ ವ್ಯತ್ಯಾಸವನ್ನು ಕಾಣಿಸಬೇಕಾದುದು ಅತಿ ಮುಖ್ಯ. ಉದಾ: ಸುಧನ್ವಾರ್ಜುನ - “ಸಡಗರದ ಮಿತ ಸಂಭ್ರಮದಿ ವರೂಥವ ನಡರಿ ಮುಂಬೈ ತರಲು” . ಇದಿಷ್ಟು ಅರ್ಜುನನ ಭಾಗ - “ತಡೆದು ಸುಧನ್ವ ತಾ ನಿದಿರಾಗಿ ತವಕದಿ ನುಡಿಸಿದ ಪಾರ್ಥನನು” ಇದಿಷ್ಟು ಸುಧನ್ವ ನ ಭಾಗ. ಹಾಗೇ “ಎಲವೊ ಬಾಹಿರ ರಣೋತ್ಸವವನ್ನು ಬಿಟ್ಟು ಹಿಂದುಳಿದೆ ನೀನೇಕೆನಲು,” - ಇದು ಹಂಸಧ್ವಜನ ಭಾಗ, K “ಅಳುಕುತ ಲಜ್ಜೆಯಿಂದಯ್ಯಗೆ ನುಡಿದನು ಬಾಗಿಸುತಾಗಳು' - ಇದು ಸುಧನ್ವನ ಭಾಗ ಒಂದೇ ಪದ್ಯದಲ್ಲಿ ಎಷ್ಟೊಂದು ವಿರುದ್ಧ ಭಾವಗಳು. ಕೃಷ್ಣಲೀಲೆಯಲ್ಲಿ ದುಷ್ಟಭಾವದೊಳೊಂದು. ಅನು ಜೆಯಕ್ಕರೆ ಯೊಂದು, ಅಷ್ಟಮದಹಂಕಾರದೊಳಗೊಂದು, ಕೃಷ್ಣಜನನ ಸ್ಥಿತಿಯ ಮರಣ ಭಯ ಇನ್ನೊಂದು” ಎಷ್ಟೊಂದು ಭಾವ ವ್ಯತ್ಯಾಸ! ಇವೆಲ್ಲ ಭಾಗವತನೇ ಅಭಿನಯಕ್ಕೆ ಜೀವಾಳ. -ಇವೆಲ್ಲ ಪದ್ಯಗಳನ್ನು ಕಡತೋಕ ಮಂಜುನಾಥ ಭಾಗವತರು, ಹಾಡಿ ದಾಗ ಒಂದು ಹೊಸ ಲೋಕವನ್ನೇ ಕಂಡಂತಾಯಿತು ನನಗೆ. ಆಟದ ಅಭಿನಯದಲ್ಲಿ ಎಲ್ಲ ತಿಟ್ಟುಗಳಲ್ಲಿ ಮುಕ್ತವಾಗಿ, ಕೆಲವು ವಿಷಯಗಳಲ್ಲಿ ಚೆನ್ನಾಗಿ ಬೆಳವಣಿಗೆ ಗೊಂಡಿರುವ ಭಾಗವೆಂದರೆ ಹಾಸ್ಯಗಾರನದು, ಆ ಪಾತ್ರಕ್ಕೆ ಇರುವ ಸ್ವಾತಂತ್ರ್ಯವೂ ಅದಕ್ಕೆ ಕಾರಣ. ಸ್ತ್ರೀವೇಷಗಳ ಅಭಿನಯವೂ ಪ್ರಗತಿಯಾಗಿದೆ. ಆ ಪ್ರಮಾಣದಿಂದ ಪುರುಷ ಪಾತ್ರಗಳ ಅಭಿನಯ ವಿಕಾಸ ಈ ಕಡೆ ಆಗಿಲ್ಲ ಅನ್ನ ಬೇಕು.
ಇತ್ತೀಚೆಗೆ ಅಭಿನಯದ ಕುರಿತಾಗಿ ಬಂದಿರುವ ಮೆಚ್ಚುಗೆ, ಆಗಿರುವ ಜಾಗೃತಿಗಳಿಂದ ಹಾಡುವ ರೀತಿಯಲ್ಲಿ ಬಹಳಷ್ಟು ಪರಿವರ್ತನೆ ಆಗಿದೆ. ಸೃಷ್ಟಿಶೀಲ ವಾದ ಬದಲಾವಣೆ ಆಗಿದೆ. ಚೆಂಡೆ ಮದ್ದಲೆ ವಾದನದಲ್ಲೂ ಹೊಸ ವೈವಿಧ್ಯ, ನಾಜೂಕು ಬಂದಿವೆ. ಹಾಗೇ ಹಲವು ಅಸಂಬದ್ಧಗಳೂ, ಸಮಸ್ಯೆಗಳೂ ತಲೆ ಹಾಕಿವೆ. ಬಹುಮಟ್ಟಿಗೆ - ಪುರಾಣಗಳೂ, ನಮ್ಮ ಪ್ರಸಂಗ ಸಾಹಿತ್ಯವೂ ನಿರ್ಮಿಸುವ ವ್ಯಕ್ತಿಗಳ ಸಮುದಾಯ, ಪಾತ್ರ ಪ್ರಪಂಚ ಸರಳ, ಮುಗ್ಧವಾದದ್ದು, ರಸ ಪ್ರಪಂಚ, ಅದರ