ಈ ಪುಟವನ್ನು ಪ್ರಕಟಿಸಲಾಗಿದೆ
ನಾಲ್ಕು ವೇಷಗಳು


ಪ್ರಮಾಣ ಗಳ ನ್ನು ಹೊಂದಿದೆ. ಕಚ್ಚೆಯ ಉಡುಗೆ, ಚಿಕ್ಕದಾದ ಸೋಗೆ ವಲ್ಲಿ (ಹಗಲವಲ್ಲಿ) ಗಳಿಂದ ಅದು 'ಸಪುರ' ವಾಗಿ ಕಾಣುತ್ತದೆ. ತೆಂಕಣ ಬಣ್ಣದ ವೇಷ ಮೂಡಿಸುವ ಅದ್ಭುತತೆ, ಗಾಂಭೀರ್ಯ , ಭೀಕರತೆಗಳನ್ನು ಗಮನಿಸಿದಾಗ ಈ ಅಂಶ ಸ್ಪಷ್ಟವಾಗುತ್ತದೆ.
ತೆಂಕಣ ಬಣ್ಣದ ವೇಷ, ಕಿರೀಟದಿಂದ ಆಡಿಯವರೆಗೆ ಪ್ರಮಾಣ ಬದ್ಧವಾಗಿದೆ. ಬರವಣಿಗೆಯ ನಾಜೂಕು ಹೆಚ್ಚು. ಕೈ, ಮೈ, ಸೊಂಟಗಳಿಗೆ ವಸ್ತುಗಳನ್ನು ತುಂಬಿ 'ಭರ್ಜರಿ' ಆಗಿಸಿ, ಅದರ ಮೇಲೆ ಬಾಲ್ಕುಂಡು ಕಿರಿಗಣೆಯನ್ನು ಕಟ್ಟುವುದರಿಂದ ಇಡಿಯ ವೇಷ ಸಪ್ರಮಾಣವಾಗಿ ಎದ್ದು ಕಾಣುತ್ತದೆ. ತೆಂಕಿನ ಬಣ್ಣದ ವೇಷದ ಹೆಜ್ಜೆಗಳು, ಗತ್ತುಗಳು, ಚಲನೆಗಳು ಪರಿಣಾಮಕಾರಿಯಾಗುವುದಕ್ಕೆ ಇಂತಹ ಅಂಗ ಸಪ್ರಮಾಣತೆಯೇ ಕಾರಣ. ಬಡಗಿನ ಎರಡೂ ತಿಟ್ಟುಗಳಲ್ಲಿ ಬಣ್ಣದ ವೇಷದ ಪುನರುಜೀವನ, ಪುನಾ ರಚನೆ ಆಗಬೇಕಾದ ಅವಶ್ಯಕತೆಯಿದೆ. ಅದಕ್ಕೆ ಹೊಸ ರೂಪ ಕೊಡುವಲ್ಲಿ ಸೊಂಟಕ್ಕೆ ಬಾಲು ಮುಂಡನ್ನು ಬಳಸಬಹುದು. ದೇಹದ, ಸೊಂಟದ ಗಾತ್ರವನ್ನು (ಸಿ ಉಬ್ಬಿಸಿ ಎದೆಯ ಪದಕವನ್ನು ದೊಡ್ಡದಾಗಿ ರಚಿಸಬೇಕು. ಮುಖವರ್ಣಿಕೆಗಳಲ್ಲಿ ಹಳೆಯ ಪದ್ಧತಿಯ ವೈವಿಧ್ಯ, ಸೂಕ್ಷ್ಮತೆಗಳನ್ನು ಪುನಃ ಬಳಕೆಗೆ ತರಬೇಕಾದುದು ಅವಶ್ಯ.
ಬಡಗುತಿಟ್ಟಿನ 'ವೃಷಕೇತು' ವೇಷ: -
ಪಾಂಡವ ಅಶ್ವಮೇಧ ಪ್ರಸಂಗಗಳಲ್ಲಿ ಬರುವ ವೃಷಕೇತು ಪಾತ್ರಕ್ಕೆ ದೊಡ್ಡ ಗಾತ್ರದ ಮುಂಡಾಸನ್ನು, ದಪ್ಪ ಮೀಸೆಯನ್ನು ಬಳಸುತ್ತಾರೆ. ಇದು ಔಚಿತ್ಯ ಪೂರ್ಣವೆನಿಸಲಾರದು. ಒಡ್ಡೋಲಗದ ಪಾತ್ರಗಳಲ್ಲಿ ವೇಷ ವೈವಿಧ್ಯವನ್ನು ತರುವುದಕ್ಕಾಗಿಯೋ, ಅಥವಾ ದೊಡ್ಡ ಮುಂಡಾಸಿನ ವೇಷಗಳಿಗೆ ಮೀಸಲೆನಿಸಿದ ವೇಷಧಾರಿಗಳಿಗೆ ಈ ಪಾತ್ರ ಬಂದುದರಿಂದಲೋ ಈ ಕ್ರಮ ಬಳಕೆಗೆ ಬಂದು ಮತ್ತೆ ಅದೆ: ಮುಂದುವರಿದು ಹೀಗಾಗಿರಬೇಕು.
ಒಟ್ಟು ಯಕ್ಷಗಾನ ವೇಷ ವಿಧಾನ'ವಾಸ್ತವ'ವಲ್ಲದಿದ್ದರೂ ಕಾಲ್ಪನಿಕ ವೇಷ ವಿಧಾನದ ಚೌಕಟ್ಟಿನಲ್ಲಿ, ಅದು ಪಾತ್ರದ ಸ್ಥಾನವನ್ನೂ ವಯಸ್ಸು, ಪಾತ್ರ ಪ್ರಕೃತಿ ಇವನ್ನು ನಿರ್ದೇಶಿಸುವಲ್ಲಿ ಔಚಿತ್ಯವನ್ನು ಸಾಧಿಸಬೇಕು. ವೃಷಕೇತು ಓರ್ವ ತರುಣ ವೀರ. ಅರ್ಜುನನ ಮಗನ ಸ್ಥಾನದಲ್ಲಿರುವ ವ್ಯಕ್ತಿ; ಅವನಿಗೆದುರಾದ ಬಬ್ರುವಾಹನ, ಪ್ರವೀರ ಮುಂತಾದವರ ಹೋಲಿಕೆಯವನು, ಅಂತಹ ವ್ಯಕ್ತಿಯನ್ನು ದೊಡ್ಡ ಮುಂಡಾಸು, ದಪ್ಪ ಮೀಸೆಗಳ ವೇಷದಿಂದ (ಕರ್ಣನ ಹಾಗೆ) ಚಿತ್ರಿಸುವುದು