ಈ ಪುಟವನ್ನು ಪ್ರಕಟಿಸಲಾಗಿದೆ

೮೨ | ಜಾಗರ
ಸರಿಯೆನಿಸದು. ಅಂತಹ ವೇಷದ ವೃಷಕೇತು ಅರ್ಜುನನಿಗಿಂತ ಹಿರಿಯವನಾಗಿ ಕಾಣಿಸುತ್ತಾನೆ. ಇದು ಕಥಾ ಸ್ವರೂಪಕ್ಕೂ, ಪಾತ್ರಗಳ ಸ್ಥಾನ ಸಂಬಂಧಕ್ಕೂ ಭಂಗ, ವೃಷಕೇತು ಅಭಿಮನ್ಯು ಬಬ್ರುವಾಹನರಂತಿರಬೇಕಲ್ಲದೆ ಕರ್ಣಶಲ್ಯರಂತಲ್ಲ. ಇದೇ ವಿಚಾರವನ್ನು ಶ್ರೀ ನಾಜ ಗಾರ ಗಂಗಾಧರ ಶಾಸ್ತ್ರಿಗಳು 'ಪಾತ್ರಪೋಷಣೆ ಯಲ್ಲಿ ವೇಷಭೂಷಣಗಳ ಸ್ಥಾನ' (ಶೃಂಗಾರ, ಜನವರಿ 1973) ಲೇಖನದಲ್ಲಿ ವಿವೇಚಿಸಿದ್ದಾರೆ.
ಇದಕ್ಕೊಂದು ಪ್ರತಿವಾದವಿದೆ. ವೃಷಕೇತು ಕರ್ಣನ ಮಗನಾದುದರಿಂದ ಅದು ದೊಡ್ಡ ಮುಂಡಾಸಿನ ವೇಷ, ಎಂದು. “ತಂದೆಯಂತೆ ಮಗ'ನೆಂಬ ಸೂತ್ರ ವನ್ನು ವೇಷವಿಧಾನಕ್ಕೆ ಅನ್ವಯಿಸಿದರೆ ರಾವಣನ ಮಕ್ಕಳಾದ ಅತಿಕಾಯ ಇಂದ್ರಜಿತು ಬಣ್ಣದ ವೇಷಗಳಾಗಬೇಕಾಗುತ್ತದೆ. ಸುಧನ್ವನು ಹಂಸಧ್ವ ಜನಂತೆಯೂ, ರಾಮನು ದಶರಥನಂತೆಯೂ ಇರಬೇಕಾಗುತ್ತದೆ. ಇದು ಉಚಿತವೆನಿಸಲಾರದಷ್ಟೆ? ಕುರುಕ್ಷೇತ್ರ ದಲ್ಲಿ ಹೋರಾಡುವ ವೃಷಸೇನನೂ ಕರ್ಣನ ಮಗನೇ ಆದರೂ ಅದನ್ನು ಪುಂಡು ವೇಷವಾಗಿಯೇ ಚಿತ್ರಿಸಿರುವುದು ಔಚಿತ್ಯಪೂರ್ಣ, ವೃಷಕೇತು ವೇಷಕ್ಕೆ ಅದೇ ಮಾದರಿ, ಪ್ರಸಂಗಗಳಲ್ಲಿ ಕರ್ಣ - ವೃಷಕೇತು ಇವರ ಸ್ಥಾನಗಳೇ ಬೇರೆ ಬೇರೆ.
ತೆಂಕುತಿಟ್ಟಿ ನಲ್ಲೂ , ಉತ್ತರ ಕನ್ನಡದಲ್ಲೂ ವೃಷಕೇತು ಪಾತ್ರಕ್ಕೆ ಬಳ ಸುವ ವೇಷವಿಧಾನ ಒಂದೇ ಬಗೆಯದೆಂಬುದು ಗಮನಾರ್ಹ, ಚಿಕ್ಕ ಪಗಡಿ, ಮೀಸೆ ಇಲ್ಲದ ಮುಖ ಇವೇ ಆ ತರುಣ ಪಾತ್ರದ ಸರಿಯಾದ ಚಿತ್ರಣಕ್ಕೆ ಸೂಕ್ತ.
ತೆಂಕುತಿಟ್ಟಿನ ಭೀಮ
ಮಹಾಭಾರತದುದ್ದಕ್ಕೂ ಭೀಮ ಒಂದು ಪ್ರಧಾನ ಪಾತ್ರ. ಭೀಮ ನು ಪೌರುಷವಾದಿ, ಸಿಡುಕುಸ್ವಭಾವದ ವ್ಯಕ್ತಿ, ಭವ್ಯಶರೀರಾಕೃತಿಯವನು, ಧರ್ಮರಾಜ ಅರ್ಜುನರಿಗಿಂತ ಭಿನ್ನ ರೀತಿಯ ವ್ಯಕ್ತಿ - ಇವು ಭೀಮನ ಬಗ್ಗೆ ಮೂಡುವ ಕಲ್ಪನೆ ಗಳು, ತೆಂಕುತಿಟ್ಟಿನಲ್ಲಿ ಭೀಮನ ಪರಾಕ್ರಮ, ರೌದ್ರತೆಗಳಿಗೆ ಮಹತ್ವ ನೀಡಿ ಬಣ್ಣದ ವೇಷವಾಗಿ ಚಿತ್ರಿಸುವ ಸಂಪ್ರದಾಯ ಇದೆ. ಈ ಪಾತ್ರಕ್ಕಾಗಿಯೇ ರಚನೆ ಗೊಂಡ ಭೀಮನ ಕಿರೀಟವೆಂಬುದು ಇದೆ. ಹಣೆಯಲ್ಲಿ ಆನೆಕಣ್ಣು, ಗಲ್ಲದ ಮೇಲ್ಬಾಗ ದಲ್ಲಿ ಚಕ್ರಗಳು, ಮೂಗಿನಿಂದ ಹಣೆವರೆಗೆ ಉದ್ದ ದಪ್ಪದ ನಾಮ, ಅದರೊಳಗೆ ಕೆಂಪು ಬಣ್ಣ, ಮುಖದಲ್ಲಿ ಚುಟ್ಟಿ ಸಾಲುಗಳು-ಇರುತ್ತವೆ. ಭೀಮನ ಪ್ರವೇಶದಲ್ಲೂ ಅಟ್ಟಹಾಸ ಇದ್ದು - ಒಟ್ಟಿನಲ್ಲಿ ಇದು ರಾಕ್ಷಸ ಪಾತ್ರವೆಂಬಂತೆ ಸೃಷ್ಟಿಸಲ್ಪಟ್ಟಿದೆ.
ಭೀಮನ ಪಾತ್ರದ ಭವ್ಯತೆ, ರೌದ್ರಭಾವ, ಮುಂತಾದ ವೈಶಿಷ್ಟ್ಯಗಳನ್ನು ಚಿತ್ರಿಸಲು ಅವನಿಗೆ ಧರ್ಮರಾಜ, ಅರ್ಜುನರಿಗಿಂತ ಭಿನ್ನವಾದ ವೇಷ, ಮುಖ