ಈ ಪುಟವನ್ನು ಪ್ರಕಟಿಸಲಾಗಿದೆ



೯೦

ಪರಂತಪ ವಿಜಯ


ಕಲಾವತಿ- ನನ್ನನ್ನು ನೀನು ಮದುವೆ ಮಾಡಿಕೊಂಡರೆ, ನನ್ನ ತಂದೆಯ ಆಸ್ತಿಯಲ್ಲಿ ಅರ್ಧ ಆಸ್ತಿಯು ನಿನಗೆ ಬರುವುದು. ತಿರಸ್ಕರಿಸಿದರೆ ನಿನಗೆ ಒಂದು ಕಾಸೂ ಬರುವುದಿಲ್ಲ.
ಶಂಬರ- ನಿನ್ನ ತಂದೆಯು ಈ ರೀತಿಯಲ್ಲಿ ಎಂದಿಗೂ ಏರ್ಪಾಡು ಮಾಡಿರಲಾರನು. ಅವನು ಬರೆದಿರತಕ್ಕ ಉಯಿಲನ್ನು ನಾನು ಪ್ರತ್ಯಕ್ಷ ವಾಗಿ ನೋಡಿದ ಹೊರತು, ನಿನ್ನ ಮಾತನ್ನು ನಾನು ನಂಬಲಾರೆನು. ಅದು ಹಾಗಿರಲಿ; ನಾನು ನಿನ್ನನ್ನು ಮದುವೆ ಮಾಡಿಕೊಳ್ಳುವೆನೆಂಬ ಆಶೆಯನ್ನು ಬಿಡು. ಪ್ರಪಂಚದಲ್ಲಿ ನನಗೆ ಅನುರೂಪಳಾದ ಸ್ತ್ರೀರತ್ನವು ಒಬ್ಬಳೆ ಒಬ್ಬಳು. ಅವಳೇ ಕಾಮಮೋಹಿನಿಯು.
ಕಲಾವತಿ- ಕಾಮಮೋಹಿನಿಯನ್ನು ಮದುವೆ ಮಾಡಿಕೊಳ್ಳತಕ್ಕ ಆಶೆಯನ್ನು ನೀನು ಬಿಡು. ಅವಳು ತನಗೆ ಅನುರೂಪನಾದ ಸತಿಯನ್ನು ವರಿಸಿರುವಳು. ಅವರಿಗೆ ವಿವಾಹವು ಪೂರಯಿಸಿರುವುದು.
ಶಂಬರ- ವ್ಯರ್ಥವಾದ ಮಾತುಗಳನ್ನು ಏತಕ್ಕೆ ಅಡುವೆ ? ಕಾಮಮೋಹಿನಿಯು ನನ್ನ ಕರಗತಳಾಗಿರುತ್ತಾಳೆ. ಆ ಚಂಡಾಲನಾದ ಪರಂತಪನ ಅವತಾರವು ಒಂದು ನಿಮಿಷದಲ್ಲಿ ಪೂರಯಿಸುವುದು, ಕಾಮಮೋಹಿನಿಯು ನನ್ನ ದಾಸಿಯಾಗಿಯಯೂ ನಾಯಕಿಯಾಗಿಯೂ ಇರುವಳು.
ಕಲಾವತಿ- ಹಾಗೋ? ನಿನ್ನ ಬಡಾಯಿಯನ್ನು ನೋಡಿದರೆ, ನೀನು ಪರಂತಪನನ್ನು ಖೂನಿಮಾಡಿರಬಹುದೆಂದು ತೋರುತ್ತದೆ.
ಶಂಬರ- ಪರಂತಪನು ಶೀಘ್ರದಲ್ಲಿ ದೇಹತ್ಯಾಗವನ್ನೇ ಮಾಡಬಹುದು. ಅಥವಾ, ಜೀವಂತನಾಗಿದ್ದಾಗ್ಯೂ, ನನಗೂ ಕಾಮಮೋಹಿನಿಗೂ ಶೀಘ್ರದಲ್ಲಿ ಉಂಟಾಗತಕ್ಕ ಸಂಬಂಧವನ್ನು ತಪ್ಪಿಸುವುದಕ್ಕೆ ಅವನಿಗೆ ಸ್ವಲ್ಪವೂ ಶಕ್ತಿಯಿರುವುದಿಲ್ಲ.
   ಈ ಮಾತನ್ನು ಕೇಳಿದಕೂಡಲೆ, ಕಲಾವತಿಗೆ ಬಹಳ ಕೋಪವುಂಟಾಯಿತು. ಈ ದುರಾತ್ಮನನ್ನು ಕೊಲ್ಲೋಣವೇ ಬೇಡವೇ ಎಂದು ಯೋಚಿಸುತಿದ್ದಳು.
ಕಲಾವತಿ- ಎಲಾ ದುರಾತ್ಮನಾದ ಶಂಬರನೇ! ನನ್ನನ್ನು ಮದುವೆ ಮಾಡಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿ ವಂಚಿಸಿದ್ದೀಯೆ. ನೀನು ಮಹಾ