ಈ ಪುಟವನ್ನು ಪ್ರಕಟಿಸಲಾಗಿದೆ

ಅಧ್ಯಾಯ ೯

೮೫


ನಾಲಗೆಯನ್ನು ಸೀಳಿ ಭೂತಗಳಿಗೆ ಔತಣಮಾಡುವೆನು. ನನಗೆ ಬಂಧ ವಿಮೋಚನೆಯಾಗದ ಪಕ್ಷದಲ್ಲಿ, ನಿನ್ನ ದುಷ್ಕೃತ್ಯಗಳೇ ನಿನ್ನನ್ನು ಸುಡುವುವು.
ಶಂಬರ- ಎಲೆ ಕರಾಳ! ಈ ನೀಚನನ್ನು ಸೆರೆಯಲ್ಲಿಟ್ಟು, ನಿತ್ಯವೂ ಇವನಿಗೆ ಎರಡು ಡಜನ್ ಛಡಿಯೇಟುಗಳನ್ನು ಹಾಕು. ಇವನಿಗೆ ಒಂದೇ ಹೊತ್ತು ಆಹಾರವನ್ನು ಹಾಕು. ಇವನಿಗೆ ಹೊಡೆಯುವಾಗ ಮಾತ್ರ, ಜಾಗರೂಕನಾಗಿ ಪ್ರಾಣ ಹೋಗದಂತೆ ನೋಡಿಕೋ; ಇವನ ಆತ್ಮಹತ್ಯಕ್ಕೆ ಅವಕಾಶ ಕೊಡದಂತೆ ಜಾಗರೂಕನಾಗಿರು. ಕರಾಳನು "ಅಪ್ಪಣೆ" ಎಂದು ಕರೆದುಕೊಂಡು ಹೋಗುವಷ್ಟರಲ್ಲಿ, ಅರ್ಥಪರನು ಬಂದನು.
ಶಂಬರ - ಎಲೈ ಅರ್ಥಪರನೆ! ಕಾರಾಗೃಹವನ್ನು ಸಿದ್ಧಪಡಿಸಿರುವೆಯಾ?
ಅರ್ಥಪರ- ದೃಢವಾದ ಸಲಾಕಿಗಳಿಂದ ಅಭೇದ್ಯವಾಗಿರುವಂತೆ ಮಾಡಿಸಿರುವೆನು.
ಶಂಬರ- ಈತನ ಉಡುಪುಗಳನ್ನು ತೆಗೆಸಿ, ಕಾರಾಗೃಹಕ್ಕೆ ಯೋಗ್ಯವಾದ ಉಡುಪುಗಳನ್ನು ತೊಡಿಸು. ಅರ್ಥಪರನು ಅದರಂತೆಯೇ ಅವನಿಗೆ ಮೊದಲಿನ ಉಡುಪುಗಳನ್ನು ತೆಗೆಸಿ, ಬೇರೆ ಉಡುಗೆಗಳನ್ನು ತೊಡಿಸಿದನು.
ಶಂಬರ - ಇವನ ಜೇಬಿನಲ್ಲಿ ವಿವಾಹದ ಕರಾರು ಇರುವುದೇನೋ ನೋಡು.
ಅರ್ಥಪರ- (ನೋಡಿ) ಇಲ್ಲ.
ಶಂಬರ- ಎಲಾ ನೀಚನೇ ! ಆ ಕಾಗದವೇನಾಯಿತು?
ಪರಂತಪ- ನಾನು ಹೇಳತಕ್ಕವನಲ್ಲ.
ಶಂಬರ-ಬಳ್ಳೆಯದು. ನಿನ್ನಿಂದಲೇ ನಾನು ಹೇಳಿಸುತ್ತೇನೆ. (ಬಾರು ಮಾಡಿದ ಪಿಸ್ತೂಲನ್ನು ಅವನಿಗೆ ಇದಿರಾಗಿ ಹಿಡಿದನು.)
ಪರಂತಪ -ಛೀ! ಹೇಡಿಯೇ! ಬಿಡು. ಈ ಗೊಡ್ಡು ಬೆದರಿಕೆಗೆ ನಾನು ಹೆದರತಕ್ಕವನಲ್ಲ. ಈ ಕಾರಾಗೃಹವಾಸಕ್ಕಿಂತ ಮರಣವೇ ಉತ್ತಮವೆಂದು ಭಾವಿಸಿರುವೆನು. ನೀನು ಹೊಡೆದರೂ ಸರಿ, ನಾನು ಹೇಳ ತಕ್ಕವಲ್ಲ.