ಈ ಪುಟವನ್ನು ಪ್ರಕಟಿಸಲಾಗಿದೆ


ಉಪೋದ್ಘಾತ

೧. ಕವಿ
'ಯಶೋಧರ ಚರಿತೆ'ಯನ್ನು ಬರೆದ ಕವಿ ಜನ್ನ. ಕಮ್ಮೆವಂಶದ ಕಾಶ್ಯಪ
ಗೋತ್ರದ “ಶಂಕರ” ಎಂಬುವನು ಹೊಯ್ಸಳ ನಾರಸಿಂಹನಲ್ಲಿ ಕಟಕೋಪಾ
ಧ್ಯಾಯನಾಗಿದ್ದನು. ಇವನಿಗೆ 'ಸುಮನೋಬಾಣ'ನೆಂಬ ಬಿರುದಿತ್ತು. ಈತನ ಹೆಂಡತಿ
ಗಂಗಾದೇವಿ. ಇವರಿಗೆ, ಅನಂತನಾಥಜಿನನು ಹುಟ್ಟಿದ ಆಷಾಡಕೃಷ್ಣ ತ್ರಯೋದಶೀ
ರೇವತಿ ನಕ್ಷತ್ರ* ಶಿವಯೋಗದಲ್ಲಿ ಜನ್ನನು ಹುಟ್ಟಿದನೆಂದು ಅವನೇ
ಹೇಳಿಕೊಂಡಿದ್ದಾನೆ. ಈತನ ಹೆಂಡತಿ “ರಾಯ ದಂಡಾಧಿನಾಥ ಕೃತಾಂತಂ
ಪಸರ್ವೆತ್ತ ಚಾಕಣನಪತ್ಯಂ ರೇಚಯಂ ಪೆತ್ತ ಪುತ್ರಿ” ಲಕುಮಾ ದೇವಿ. ಇವನ
ಧಾರ್ಮಿಕಗುರು ಕಾಣೂರ್ಗಣದ ಮಾಧವಚಂದ್ರ ಶಿಷ್ಯನಾದ ಗಂಡವಿಮುಕ್ತ
ರಾಮಚಂದ್ರಮುನಿ. ಚಾಳುಕ್ಯ ಜಗದೇಕಮಲ್ಲನಲ್ಲಿ ಕಟಕೋಪಾಧ್ಯಾಯನಾಗಿಯೂ
ಅಭಿನವ ಶರ್ಮವರ್ಮನೆಂಬ ಬಿರುದುಳ್ಳವನಾಗಿಯೂ ಇದ್ದ ಎರಡನೆಯ
ನಾಗವರ್ಮನು ಇವನ ಉಪಾಧ್ಯಾಯನಾಗಿದ್ದನು. ಸೂಕ್ತಿಸುಧಾರ್ಣವವನ್ನು ಬರೆದ
ಮಲ್ಲಿಕಾರ್ಜುನನು ಈತನ ಸೋದರಿಯ ಪತಿ; ಮತ್ತು ಶಬ್ದಮಣಿದರ್ಪಣವನ್ನು
ಬರೆದ ಕೇಶಿರಾಜನು ಇವನ ಸೋದರಳಿಯ.
ಜನ್ನನೇ ಹೇಳಿಕೊಂಡಂತೆ ಅವನು ವೀರಬಲ್ಲಾಳನ ಆಸ್ಥಾನಕವಿಯಾಗಿದ್ದು
ಅವನಿಂದ ಕವಿಚಕ್ರವರ್ತಿ ಎಂಬ ಬಿರುದನ್ನು ಪಡೆದನು. ಮಾತ್ರವಲ್ಲ, ಬಲ್ಲಾಳನ
ಮಗ ನರಸಿಂಹನಲ್ಲಿ ನಿಂದಿರೆ ದಂಢಾಧೀಶಂ ಕುಳ್ಳಿರೆ ಮಂತ್ರಿ ತೊಡಂಕೆ ಕವಿ”
ಯಾಗಿದ್ದನು; ಇವನ ಧರ್ಮಶ್ರದ್ದೆ ಇವನಿಗೆ ಅನಂತನಾಥನ ಬಸದಿಯನ್ನು
ಕಟ್ಟಿಸುವ ಹಾಗೂ ಪಾರ್ಶ್ವಜಿನೇಶ್ಚರನ ಬಸದಿಯ ದ್ವಾರವನ್ನು ಮಾಡಿಸುವ
–––––––––––––––
* ಅಷಾಢ ಕೃಷ್ಣತ್ರಯೋದಶಿಯಂದು ರೇವತೀನಕ್ಷತ್ರ ಬರುವುದು ಹೇಗೋ ತಿಳಿಯದು.
ಏಕೆಂದರೆ ಆಷಾಢಮಾಸದ ಪೌರ್ಣಮಿ ಪೂರ್ವಾಷಾಢ ಅಥವಾ ಉತ್ತರಾಷಾಢ
ನಕ್ಷತ್ರಗಳಲ್ಲಿಯೇ ಹೆಚ್ಚಾಗಿ ಬರುತ್ತದೆ. ಆನಂತರ ಹದಿಮೂರು ದಿವಸಗಳು ತ್ರಯೋದಶಿ
ಬರುವಾಗ, ರೇವತೀನಕ್ಷತ್ರ ದಾಟಿ ಎಷ್ಟೋ ದಿನಗಳ ಅವಧಿ ಕಳೆದಿರುತ್ತದೆ.