ಈ ಪುಟವನ್ನು ಪ್ರಕಟಿಸಲಾಗಿದೆ

ಯಶೋಧರ ಚರಿತೆ


ಅಮೃತಮತಿಗೆ ಪಕ್ಕದ ಗಜಶಾಲೆಯ ಮಾವಟಿಗನ ಹಾಡಿನ ಇಂಚರ ಕೇಳುತ್ತದೆ.
ಅವಳು ಕೂಡಲೇ ಆತನಿಗೆ ತನ್ನ ಮನಸ್ಸನ್ನು 'ಪಸಾಯ ದಾನಂ ಗೊಟ್ಟಳು.'
ಅವನನ್ನು ನೋಡುವ, ಆಮೇಲೆ ಕೂಡುವ ಚಿಂತೆ ಅವಳಿಗೆ ಕಡಲ್ವರಿಯಿತು.
ಬೆಳಗಾದ ಮೇಲೆ ತನ್ನ ಕೆಳದಿಯನ್ನು ಆತನ ಬಳಿಗೆ ಕಳುಹಿಸುತ್ತಾಳೆ. ಅವಳು
ಅಷ್ಟವಂಕನನ್ನು ಕಂಡು ಹೇಸಿ ಘಕ್ಕನೆ ಮರಳುತ್ತಾಳೆ ಅತ್ಯಾತುರದಿಂದಿದ್ದ
ಅಮೃತಮತಿಯೊಡನೆ 'ಇಂತಹ ಕಾಮದೇವನನ್ನು ಹೇಗೆ ಹುಡುಕಿ ಒಲಿದೆಯೋ?
ಎಂದು ವ್ಯಂಗ್ಯವಾಗಿ ನುಡಿಯುತ್ತಾಳೆ. ಅಮೃತಮತಿಯ ಕಾಮ ಕೆರಳಿ, ವ್ಯಂಗ್ಯ
ತಿಳಿಯದೆ, ಆತನ ರೂಪವನ್ನು ತಿಳಿಯ ಬಯಸುತ್ತಾಳೆ. ಅಷ್ಟಾವಕ್ರನ ವಿಕಾರಗಳ
ವರ್ಣನೆಯನ್ನು ಕೇಳಿ, ಕಾಮದ ಕೋಟಲೆಯಿಂದ 'ಪೊಲ್ಲಮೆಯೆ ಲೇಸು
ನಲ್ಲರ ಮೆಯ್ಯೋ” ಎಂದು ಸಮಾಧಾನ ತಂದುಕೊಳ್ಳುತ್ತಾಳೆ. ಅನಂತರ ದೂತಿಗೆ
ಲಂಚವಿತ್ತು ಮಾವಟಿಗನ ಒಡನಾಟವನ್ನು ದಕ್ಕಿಸಿಕೊಂಡು, ಕ್ರಮಕ್ರಮವಾಗಿ
ಯಶೋಧರನಿಂದ ದೂರವಾಗುತ್ತಾಳೆ. ಇದರ ಸೋವು ಸಿಕ್ಕಿದ ಯಶೋಧರನು
ಪರೀಕ್ಷಿಸಿ ನೋಡಲು ಮುಂದಾಗುತ್ತಾನೆ. ಅಮೃತಮತಿ ಜಾರನಲ್ಲಿಗೆ ಹೋಗುವ
ಹೊತ್ತಿಗೆ ಅವಳನ್ನು ಹಿಂಬಾಲಿಸಿ ಗುಟ್ಟನ್ನು ತಿಳಿಯುತ್ತಾನೆ. ಆಗ ಅವಳನ್ನೂ
ಅವಳ ನಲ್ಲನನ್ನೂ ಎರಡು ಭಾಗ ಮಾಡಬೇಕೆಂಬ ಎಣಿಕೆ ಮೂಡಿ, ಕೂಡಲೇ
ಧೃತಿ ಬಂದು, ಕೊಲ್ಲದೆ ಅವನು ಮರಳುತ್ತಾನೆ. ಮರುದಿನ ತನ್ನ ಗುಟ್ಟು
ರಟ್ಟಾದುದು ಅಮೃತಮತಿಗೂ ಗೊತ್ತಾಗುತ್ತದೆ.

ಯಶೋಧರನು ಕದಡಿದ ಮನಸ್ಸಿನಿಂದ ತಾಯಿಯ ಬಳಿಗೆ ಹೋಗಿ
ಹಿಂದಿನ ರಾತ್ರಿಯ ಘಟನೆಯನ್ನು ಕನಸಿನ ರೂಪದಿಂದ ತಿಳಿಸುವನು. ಆ
ತಾಯಿ, ಚಂದ್ರಮತಿ, ಪ್ರಾಣಿ ಬಲಿಯನ್ನು ಕೊಟ್ಟು ಶಾಂತಿ ಮಾಡುವಂತೆ ಮಗನನ್ನು
ಒತ್ತಾಯಿಸುವಳು, ಕಟ್ಟಕಡೆಗೆ ಹಿಟ್ಟಿನ ಕೋಳಿಯನ್ನು ಬಲಿ ಕೊಡುವ ನಿರ್ಧಾರಕ್ಕೆ
ಇಬ್ಬರೂ ಬರುತ್ತಾರೆ. ಹಾಗೆ ಬಲಿಕೊಡುತ್ತಿದ್ದಾಗ ಹಿಟ್ಟಿನ ಕೋಳಿಯಲ್ಲಿ ಸೇರಿದ್ದ
ಬೆಂತರವೊಂದು ಕೋಳಿಯಂತೆ ಕೂಗುತ್ತದೆ. ದೊರೆಗೆ ದಿಗಿಲಾಗುತ್ತದೆ. ಅವನು
ಮನೆಗೆ ಬಂದು, ಮಗ ಯಶೋಮತಿಗೆ ಪಟ್ಟಕಟ್ಟಿ ತಪಸ್ಸಿಗೆ ಹೊರಡಲು
ಸಿದ್ಧನಾಗುತ್ತಾನೆ. ಅದನ್ನು ತಿಳಿದ ಅಮೃತಮತಿ ಅವನನ್ನೂ ಅತ್ತೆಯನ್ನೂ ಔತಣಕ್ಕೆ
ಬರಿಸಿ, ಅವರಿಬ್ಬರನ್ನೂ ವಿಷವಿಕ್ಕಿ ಕೊಲ್ಲುತ್ತಾಳೆ.

ಹಾಗೆ ಸತ್ತ ಈ ಇಬ್ಬರೂ ಹಲವು ಸಲ ಜನ್ಮವೆತ್ತಿ, ಕಡೆಗೆ ಯಶೋಮತಿಗೆ
ಅಭಯರುಚಿ ಅಭಯಮತಿಗಳೆಂಬ ಅವಳಿ ಮಕ್ಕಳಾಗಿ ಹುಟ್ಟುತ್ತಾರೆ. ಅವರು
ಎಳೆವೆಯಲ್ಲೆ ದೀಕ್ಷೆವಹಿಸಿ ಸುದತ್ತಾಚಾರ್ಯರ ಶಿಷ್ಯರಾಗುತ್ತಾರೆ. ಚರಿಗೆಗೆ