ಈ ಪುಟವನ್ನು ಪ್ರಕಟಿಸಲಾಗಿದೆ

ಚರಿತ್ರೆ

೫೩

ನೀನೂ ತಿನ್ನು," ಎಂದು ಹೇಳುವರು. ಅಥವಾ ಪೂಜಾಸನವನ್ನುಬಿಟ್ಟು ತೂರಾಡುತ್ತ ದೇವಿಯ ಸಿಂಹಾಸನದ ಮೇಲೆ ಹತ್ತಿ ಗಾನಮಾಡುತ್ತ ದೇವಿಯ ಕೈ ಹಿಡಿದುಕೊಂಡು ಕುಣಿಯುವರು; ಹಾಸ್ಯಪರಿಹಾಸ್ಯ ಮಾಡುವರು; ಮಾತನಾಡುವರು; ಅಥವಾ ದೇವಿಯಪೂಜೆಗಾಗಿ ತಂದ ಹೂವನ್ನು ಮೊದಲು ತನ್ನ ತಲೆ, ಹೃದಯ,ಕಾಲುಗಳ ಮೇಲೆ ಪೂಜೆಮಾಡಿಕೊಂಡು ಆಮೇಲೆ ಅವನ್ನು ದೇವಿಯಪಾದಪದ್ಮದಲ್ಲಿ ಅರ್ಪಣಮಾಡುವರು.

ಇದನ್ನೆಲ್ಲ ನೋಡುತ್ತಿದ್ದ ಹೃದಯನು ಮನಸ್ಸಿನಲ್ಲಿ "ಮಾವನಿಗೆ ಖಂಡಿತವಾಗಿ ಹುಚ್ಚು ಹಿಡಿದಿರಬೇಕು; ಇಲ್ಲದೆ ಹೋದರೆ ಪೂಜೆಯಲ್ಲಿ ಎಲ್ಲಾದರೂ ಹೀಗೆ ಅನಾಚಾರ ಮಾಡುವುದುಂಟಿ ! ರಾಣಿಗೂಮಧುರಾನಾಥನಿಗೂ ಈ ವಿಧವಾದ ಪೂಜೆಯ ಸುದ್ದಿ ಗೊತ್ತಾದರೆಅವರೇನು ತಿಳಿದುಕೊಳ್ಳುತ್ತಾರೆ!" ಎಂದ೦ದುಕೊ೦ಡು' ಭಯಪಡುತಿದ್ದನು. ಯಾವಾಗ ನೋಡಿದರೂ ಪರಮಹಂಸರ ಅರ್ಚನೆಯುಹೀಗೆ ವಿಲಕ್ಷಣವಾಗಿರಲು ಅದನ್ನು ಮುಚ್ಚು ಮರೆಮಾಡುವುದುತಾನೇ ಹೇಗೆ ? ಹೃದಯನ ಹಾಗೆಯೇ ಅನೇಕರು ಪೂಜಾಕಾಲದಲ್ಲಿದೇವಸ್ಥಾನಕ್ಕೆ ಬಂದು ಈ ವಿಚಿತ್ರವಾದ ಆಚರಣೆಯನ್ನು ನೋಡಿದೇವಸ್ಥಾನದ ಅಧಿಕಾರಿಗಳಿಗೆ ತಿಳಿಸಿದರು. ಅಧಿಕಾರಿಗಳೂ ಬಂದುನೋಡಿದರು; ಆದರೆ ಆವೇಶಬ೦ದ೦ತಿದ್ದ ಪರಮಹಂಸರನ್ನು ಧಿಕ್ಕರಿಸುವುದಕ್ಕೆ ಧೈರ್ಯವಿಲ್ಲದೆ “ ಪೂಜಾರಿಗೆ ಹುಚ್ಚು ಹಿಡಿದಿದೆ, ಇಲ್ಲವೇಪಿಶಾಚಿ ಮೆಟ್ಟಿಕೊಂಡಿದೆ; ಹಾಗಲ್ಲದೆ ಪೂಜಾಕಾಲದಲ್ಲಿ ಯಾರೂಯಾವಾಗಲೂ ಹೀಗೆ ಶ್ವೇಚ್ಛಾಚಾರಮಾಡಲಾರರು; ಯಜಮಾನರಿಗೆ ಈ ವಿಷಯವನ್ನು ತಿಳಿಸಬೇಕು." ಎಂದೆಂದುಕೊಂಡರು.

ಮಧುರಾನಾಥನಿಗೆ ಈ ವರ್ತಮಾನವು ಹೋಯಿತು. ಆತನುತಾನೇ ಶೀಘ್ರದಲ್ಲಿ ದಕ್ಷಿಣೇಶ್ವರಕ್ಕೆ ಬರುವುದಾಗಿಯೂ ಅದುವರೆಗೆಅರ್ಚಕನು ತನ್ನ ಮನಸ್ಸಿಗೆ ಬಂದಂತೆ ಪೂಜೆಮಾಡುತ್ತಿರಬೇಕೆಂದೂಅದಕ್ಕೆ ಯಾರೂ ಯಾವವಿಧವಾದ ಪ್ರತಿಬಂಧಕ ಮಾಡಕೂಡ