ಈ ಪುಟವನ್ನು ಪ್ರಕಟಿಸಲಾಗಿದೆ

ಮತ್ತು ಹೊಂದಿಕೆ ಇಲ್ಲದ ಆಶಯವನ್ನು ಬಿಂಬಿಸಹೊರಟರೆ 'ಅರ್ಥ' ವಿರೋಧಾಭಾಸದ ನಿದರ್ಶನವಾಗುತ್ತದೆ. ಇಂಥಲ್ಲಿ ಪ್ರತ್ಯೇಕ ಪ್ರಸಂಗ ರಚಿಸಿ ಪ್ರದರ್ಶಿಸುವುದೇ ಸೂಕ್ತ.

ಒಟ್ಟಿನಲ್ಲಿ ಜೋಶಿ ಅವರ 'ಕೇದಗೆ' ಯಕ್ಷಗಾನದ ತಲಸ್ಪರ್ಶಿ ಅಧ್ಯಯನಕ್ಕೆ ಒಂದು ಬುನಾದಿಯನ್ನು ಹಾಕಿಕೊಟ್ಟಿದೆ. ಈವತ್ತು ಯಕ್ಷಗಾನವು ಡಾಕ್ಟರೇಟ್ ಬಿರುದಿಗಾಗಿ ಅಭ್ಯಸಿಸಲು ಅರ್ಹವಾದ ವಿಷಯವಾಗಿದೆ. ಯಕ್ಷಗಾನಪ್ರಸಂಗ ಕಾಲೇಜಿನಲ್ಲಿ ಪಠ್ಯ ಪುಸ್ತಕವಾಗಿದೆ. ಇಂಥಲ್ಲಿ ವಿಮರ್ಶಾ ಸಾಹಿತ್ಯ ಈ ರಂಗದಲ್ಲಿ ಬರುವುದು ದ್ರವ್ಯದೃಷ್ಟಿಯಲ್ಲಿ ಲಾಭಕರ ಅಲ್ಲವಾದರೂ, ತೀರ ಅಗತ್ಯ. ಕಲಾವಿದರು ಸಿದ್ಧಗೊಳ್ಳುವ ರೀತಿಯು ಈಚೆಗೆ ಬದಲಾಗಿದೆ. ವಿವಿಧ ಯಕ್ಷಗಾನ ಕೇಂದ್ರಗಳಿಂದ ಹೊರಬರುವ ಯಕ್ಷಗಾನ ಕಲಾವಿದರಿಗೆ ಇಂಥ ಗ್ರಂಥಗಳು ಕೈದೀವಿಗೆಯಾಗುತ್ತ ಕಲಾವಿದರಿಗೆ ತಮ್ಮ 'ಕಸುಬಿ' ನ ಬೆಲೆ ಗೊತ್ತಾಗುತ್ತದೆ. ಇದು ಕಲಾವಿದರಲ್ಲಿ ಮೇಳ ಸಂಘಟಕನಲ್ಲಿ ಒಮ್ಮೆ ಮೂಡಿತಾದರೆ ಸಂಸ್ಕೃತಿಯ ಅಭ್ಯುದಯ ಆರಂಭವಾಯಿತೆಂದೇ ಅರ್ಥ. ಅದುವೆ 'ಜಾಗರ' 'ಕೇದಗೆ'ಗಳ ಅಂತಿಮ ಗುರಿ.

ಕೆ. ಎಂ. ರಾಘವ ನಂಬಿಯಾರ್

ಉಪಸಂಪಾದಕ,
ಉದಯವಾಣಿ ದಿನಪತ್ರಿಕೆ
ಮಣಿಪಾಲ, ದ. ಕ. - 576 119

ದಿನಾಂಕ 19-12-1986

xi