ಈ ಪುಟವನ್ನು ಪ್ರಕಟಿಸಲಾಗಿದೆ

4/ಕೇದಗೆ

ಇದರ ಪರಿವರ್ತಿತ ರೂಪವೆಂದೂ ಮರಾಠಿ ಗ್ರಂಥವೊಂದು ಉಲ್ಲೆ ಖಿಸಿದೆ. (ಭಾರತೀಯ ಸಂಸ್ಕೃತಿಕೋಶ, ಪುಣೆ ಸಂ: ಮಹಾದೇವ ಶಾಸ್ತ್ರಿ, ಜೋಶಿ) ಮರಾಠಿ ದಶುವತಾರವು. ಇಂದಿಗೂ ಹಾಡುವಿಕೆಯಲ್ಲಿ ಕನ್ನಡ ಧಾಟಿಗಳನ್ನು ಹೊಂದಿದೆ. ಎಂದು ಶ್ರೀಃ ಮಹಾದೇವ ಶಾಸ್ತ್ರಿ ಅವರು ನನ್ನಲ್ಲಿ ಹೇಳಿದ್ದಾರೆ.

2. ಉಡುಪಿಯ ನರಹರಿತೀರ್ಥರೆಂಬ ಸ್ವಾಮಿಗಳು (13ನೇ ಶತಮಾನ) ಯಕ್ಷಗಾನ ಆಟಗಳನ್ನು ತೊಡಗಿದವರು ಎಂಬ ಐತಿಹ್ಯ.17 (ಬನ್ನಂಜೆ ಗೋವಿಂದಾಚಾರ್ಯರ ಲೆಖನ) ಇದೇ ನರಹರಿತೀರ್ಥರ ಶಿಷ್ಯನಾದ ಸಿದ್ಧೇಂದ್ರನೆಂಬ ಆಂಧ್ರದ ಯತಿಯು 'ಕೂಚಿಪುಡಿ' ಯಕ್ಷಗಾನವನ್ನು ಆರಂಭಿಸಿದನೆಂಬ ಐತಿಹ್ಯವು ಪ್ರಸಿದ್ಧವಿದೆ.18 (ಕಾರಂತರ ಯಕ್ಷಗಾನ ಬಯಲಾಟದಲ್ಲಿ ಈ ಉಶ್ಲೇಖವಿದೆ.) ನರಹರಿತೀರ್ಥರು ಮೂಲತಃ ಆಂಧ್ರದವರೆಂಬ ವಿಚಾರವೂ ಇಲ್ಲಿ ಗಮನಾರ್ಹವಾದುದು.

ಈ ಎರಡು ವಿಚಾರಗಳು ಯಕ್ಷಗಾನದ ಮೂಲಶೋಧನೆಯ ದೃಷ್ಟಿಯಿಂದ ಮಹತ್ನದವು.

ಯಕ್ಷಗಂಧರ್ವಾದಿ ಜನಾಂಗಗಳಿಗೂ, ಯಕ್ಷಗಾನಕ್ಕೂ ಸಂಬಂಧವಿಲ್ಲ ಎಂಬುದಕ್ಕೆ ಈಗ ಪುರಾವೆಗಳ ಅಗತ ವಿಲ್ಲ. ದಕ್ಷಿಣಭಾರತದ ಸಾಂಪ್ರದಾಯಿಕ ಬಯಲಾಟಗಳಾದ ತಮಿಳುನಾಡಿನ ತೆರಕ್ಕೂತ್ತು, ಆಂಧ್ರದ ವೀಥಿನಾಟಕ, ಕೇರಳದ ಕಥಕ್ಕಳಿ ನಮ್ಮ ಮೂಡಲಪಾಯ—ಪಡುವಲಪಾಯಗಳು. ಇವುಗಳಿಗೆ ಖಚಿತವಾದ ಸ್ಪಷ್ಟವಾದ ಸಾಮ್ಯಗಳಿದ್ದು ಇವೆಲ್ಲವೂ ಒಂದೇ ಮೂಲದಿಂದ ಉದಿಸಿ ಬೆಳೆದ ಕವಲುಗಳೆಂದು ಆ ಆಟಗಳನ್ನು ನೋಡಿದವರಿಗೆ ಮನದಟ್ಟಾಗುತ್ತದೆ. ವೇಷಭೂಷಣಗಳು, ರಂಗತಂತ್ರ, ವಾದ್ಯವಿಧಾನಗಳಲ್ಲಿ ಈ ರಂಗಪ್ರಕಾರಗಳೊಳಗೆ ಗೋಚರಿಸುವ ಅಸಂದಿಗ್ಹ ಸಾಮ್ಯವು ಆಕಸ್ಮಿಕವಾಗಿರುವುದು ಅಶಕ್ಯ. 'ಮೂಲ ಬಯಲಾಟ'ಕ್ಕೆ ಇವುಗಳಲ್ಲಿ ಯಾವುದು ನಿಕಟವಾಗಿದೆ? ಅಥವಾ ಯಾವ ಪ್ರಕಾರಗಳು ಮೂಲದ ಎಷ್ಟೆಷ್ಟು ಅಂಶಗಳನ್ನು ಉಳಿಸಿಕೊಂಡಿವೆ ಎಂಬುದನ್ನಾಧರಿಸಿ ಸಂಶೋಧನೆ ಸಾಗಬೇಕಾಗಿದೆ. ಮೂಲಪ್ರಕಾರವು ವಿವಿಧ ಪ್ರಾದೇಶಿಕ "ರೂಪಗಳಾಗಿ ಕವಲೊಡೆದ ಬಳಿಕೆ ಅವುಗಳೊಳಗೆ ಸಂಪರ್ಕ ಶೀರ ಕಡಿಮೆಯಾಗಿ ಅಥವಾ ಸಂಪರ್ಕವೇ ಇಲ್ಲದೆ ಶತಮಾನಗಳು ಉರುಳಿರಬಹುದು. ಆದರೂ ಅವುಗಳೊಳಗೆ ಉಳಿದು ಬಂದಿರುವ ಸಾಮ್ಯವು ಆವಾಗಿದ್ದು ಪರಿಷ್ಕಾರಗೊಂಡ ಹಂತಗಳನ್ನು, ಕಾರಣಗಳನ್ನು ಗುರುತಿಸಲು ಭದ್ರವಾದ ನೆಲೆಯನ್ನು ಒದಗಿಸುವಂತಿದೆ. ಉದಾಹರಣೆಗೆ: ಕರಾವಳಿಯ ಯಕ್ಷಗಾನಕ್ಕೆ ವಿಶೇಷವಾಗಿ ತೆಂಕುತಿಟ್ಟಿಗೆ, ತಮಿಳುನಾಡಿನ ತೆರುಕ್ಕೂತ್ತಿನ ಜತೆ ಇರುವ ಸಾಮ್ಯ, ಮೂಡಲಪಾಯ.