ಈ ಪುಟವನ್ನು ಪರಿಶೀಲಿಸಲಾಗಿದೆ

ಕಲೆ ಮತ್ತು ವ್ಯವಸಾಯ /25

ಮಾಡುತ್ತೇನೆ, ಆದುದಾಗಲಿ, ಜನ ನೋಡುತ್ತಾರೆ, ಮೆಚ್ಚುತ್ತಾರೆ, ಹಣ ಬರುತ್ತದೆ ಅನ್ನುವುದಾಗಲಿ, ನನಗೆ ನಷ್ಟವಾದರೆ ನೀವು ಕೊಡುತ್ತೀರೋ ಎಂದು ಕೇಳುವುದಾಗಲಿ ನ್ಯಾಯವೆನಿಸಲಾರದು.

ಮೇಳಗಳ ಸಂಖ್ಯೆ ಹೆಚ್ಚುತ್ತಿರುವುದು ಸ್ವಯಂಕಲೆಗೊಂದು ಒಳ್ಳೆಯ ಸಂಗತಿ ಎನ್ನಲಾಗದು. ಬದಲಾಗಿ ಅದರಿಂದ ಮಾರಕವೇ ಆಗಬಹುದು. ಕಲಾವಿದರು ಧಿಡೀರನೆ ಸೃಷ್ಟಿಯಾಗುವುದಿಲ್ಲ. ಮೇಳಗಳು ಹುಟ್ಟಿದಂತೆ ಹೇಗೋ ಕಲಾವಿದರು ಸೃಷ್ಟಿಯಾಗುತ್ತಾರೆ. ಆಟ ಆಗಬೇಕಾಗಿರುವುದರಿಂದ, ಉಪ ಪಾತ್ರಕ್ಕೆ ಸಲ್ಲುವವನು - ಅಥವಾ ಅದಕ್ಕೂ ಸಲ್ಲದವನು ಮುಖ್ಯ ಪಾತ್ರಧಾರಿಯಾಗುತ್ತಾನೆ. ಸಂಪ್ರದಾಯ, ಪ್ರಯೋಗ ಪರಂಪರೆಯ ಕೊಂಡಿ ಮೊದಲೇ ಕಳಚಿರುವುದರಿಂದ, ಆಡಿದ್ದೇ ಆಟವಾಗಿ, ಗುಣಮಟ್ಟ ಕುಸಿಯುತ್ತದೆ, ಎಲ್ಲೂ ಸಲ್ಲದವರು ಇಲ್ಲಿ ಸಲ್ಲುವ ರಂಗ ಇದಾಗುತ್ತದೆ.

ವ್ಯವಸಾಯ ಮೇಳಗಳ ಮಾಲಿಕರನ್ನು ಕೇಳಿದರೆ ಸಿಗುವ ಚಿತ್ರ ಬೇರೆ ತೆರನಾಗಿದೆ - ತಾವು ಆರ್ಥಿಕವಾಗಿ ಬಲಿಷ್ಠ ಸ್ಥಿತಿಯಲ್ಲಿ ಇಲ್ಲ, ಸಾಲ ಸೋಲಗಳಲ್ಲಿದ್ದೇವೆ, ಲಾಭಾಂಶ ಇಳಿಮುಖವಾಗಿದೆ, ಖರ್ಚುಗಳು ಏರುತ್ತಿವೆ, ಭಂಡವಾಳದ ಸಮಸ್ಯೆ ಇದೆ, ಅನ್ನುವ ಅವರು, ಕಂಟ್ರಾಕ್ಟ್ರು ಪದ್ಧತಿ ಇರುವುದರಿಂದ ಮೇಳ ಉಳಿದಿದೆ ಎಂದೂ ಹೇಳುತ್ತಾರೆ. ಮೇಲಾಗಿ ಸಾಂಪ್ರದಾಯಿಕ ಆಟ ಆಡೋಣವೆಂದರೆ, ಎಷ್ಟು ಕಲಾವಿದರಿಂದ ಸಾಧ್ಯ ಹೇಳಿ, ಎಂದೂ ಪ್ರಶ್ನಿಸುತ್ತಾರೆ.

ಇದು ಹೌದಾದರೆ, ಮೇಳಗಳ ಸಂಖ್ಯೆ ಹೆಚ್ಚುತ್ತಿರುವುದು ಹೇಗೆ ? ಅದ್ದೂರಿಯ ಪ್ರಚಾರಗಳು ಸಾಧ್ಯವಾಗುವುದು ಹೇಗೆ ? ಎಂಬ ಪ್ರಶ್ನೆ ಬರುತ್ತದೆ. ಇದರ ಉತ್ತರದ ಮೂಲ ಕಂಟ್ರಾಕ್ಟ್ ಪದ್ಧತಿಯಲ್ಲಿದೆ. ಎಲ್ಲ ಮೇಳಗಳೂ ಹೆಚ್ಚು ಕಡಿಮೆ ಎಲ್ಲ ಪ್ರದರ್ಶನಗಳನ್ನೂ ಕಂಟ್ರಾಕ್ಟ್ ನೀಡುತ್ತವೆ. ಕಂಟ್ರಾಕ್ಟ್ ವಹಿಸಿಕೊಳ್ಳುವವನಿಗೆ ಕಲೆ, ಅಭಿರುಚಿ, ಕಲೆಯ ಪರಂಪರೆ ಇವುಗಳಲ್ಲಿ ಆಸಕ್ತಿ ಇಲ್ಲ. ಕಾಳಜಿ ಮೊದಲೇ ಇಲ್ಲ. ಒಂದು ದಿನದ ಆಸಕ್ತಿ ಅವನದು. ಮೇಳವೆಂಬ ಸರಕನ್ನು ಜನರಿಗೆ ತೋರಿಸಿ ನಿಧಿ ಗಳಿಸುವುದು ಅವನ ಧೈಯ. ಸಂಘಸಂಸ್ಥೆಗಳಾದರೂ ಅಷ್ಟೆ, ವ್ಯಕ್ತಿಗಳಾದರೂ ಅಷ್ಟೆ, ದಾಕ್ಷಿಣ್ಯಕ್ಕೊ, ಒತ್ತಾಯಕ್ಕೊ, ತೊಂದರೆಗೊ ಮಣಿದು ಸ್ಥಳೀಯರು ಟಿಕೇಟು ಕೊಳ್ಳುತ್ತಾರೆ. ಒಟ್ಟು ಮಾನದಿಂದ ಬಂದಿರುವ ಹಣದ ವಹಿವಾಟಿನ ಹೆಚ್ಚಳ, ವಿವಿಧ ಮೂಲಗಳಿಂದ ಹೆಚ್ಚಿರುವ ಆದಾಯದ ಮೇಲಿಂದ ಹೇಗೊ ಹಣ ಹರಿದು ಬರುತ್ತದೆ.

ಕಂಟ್ರಾಕ್ಟ್ರು ವಹಿಸಿಕೊಂಡವರು ಟಿಕೇಟಿನ ದರವನ್ನು ಏರಿಸುತ್ತಾರೆ. ಇದರಿಂದಾಗಿ ಯಕ್ಷಗಾನದ ನಿಜವಾದ ಪ್ರೇಕ್ಷಕರನ್ನು ದೂರ ಓಡಿಸುವ ಕೆಲಸ