ಈ ಪುಟವನ್ನು ಪ್ರಕಟಿಸಲಾಗಿದೆ

ಶಚಿಯ ಆ ಅಪಿಶುನತ್ವವನ್ನು ಕಂಡು ಚಕಿತಳಾದಳು : “ಭೋಗವೆಂದರೆ ಅಂಟಿಗಿಂತಲೂ ಹೆಚ್ಚಾಗಿ ಅಂಟಿಕೊಳ್ಳುವ ದೇವತ್ವಕ್ಕಿಂತಲೂ ತ್ಯಾಗವನ್ನು ಆರಾಧಿಸುವ ಮನುಷ್ಯತ್ವವು ಹೆಚ್ಚು ಎನ್ನಬೇಕು. ಅಥವಾ ಇದು ಈತನ ಧರ್ಮಾಸಕ್ತಿಯ ಫಲವೋ? ಧರ್ಮವೃಕ್ಷವು ಸಾಕಲ್ಯವಾಗಿ ಬೆಳೆದರೆ ತ್ಯಾಗವೆನ್ನುವ ಮಹಾಫಲವನ್ನು ಕಾಯುವುದೇನು? ಬಹುಶಃ ಆ ಮಾತನ್ನು ಒಪ್ಪಿಕೊಳ್ಳಲು ಭೋಗಕ್ಕಿಂತ ತ್ಯಾಗವು ಹೆಚ್ಚೆಂದು ಒಪ್ಪಿಕೊಳ್ಳುವುದಕ್ಕೂ ಚಿತ್ತಶುದ್ಧಿಯು ಬೇಕೋ ಏನೋ?” ಎಂದು ವಿಸ್ಮಯದಿಂದ ಚಿಂತಿಸುತ್ತಿದ್ದು ಎದ್ದು ಆತನಿಗೆ ಭಕ್ತಿಪೂರ್ವಕವಾಗಿ ನಮಸ್ಕಾರ ಮಾಡಿ, ವಿರಜಾದೇವಿಯು ಕೊಟ್ಟ ಮಂಗಳ ವಸ್ತ್ರಗಳನ್ನು ಸ್ವೀಕರಿಸಿ ಬೀಳ್ಕೊಂಡು ಹೊರಟು ಬಂದಳು.

* * * *