ಈ ಪುಟವನ್ನು ಪ್ರಕಟಿಸಲಾಗಿದೆ
೧೬ / ನಾವೂ ಮನುಷ್ಯರು!
ರಾಮಣ್ಣ : ನೋಡಿ-ನೋಡಿ. ವೆಂಕಟರಮಣನ ಮುಡಿಪಿಗಿಂತಲೂ ಹೆಚ್ಚು ಪವಿತ್ರ ಈ ಎರಡೆರಡಾಣೆ. ಕಿಟ್ಟು: ಅಪ್ಪಾ, ನನ್ನದೂ ಎರಡಾಣೆ ಕೊಡು, ನಾನೂ ಮೆಂಬ ರಾಗ್ಬೇಕು. (ಎಲ್ಲರೂ ನಗುವರು.) ಕಾರ್ಯದರ್ಶಿ: ಈಗ ನೀನು ಕೆಲಸಕ್ಕೆ ಹೋಗುವುದಿಲ್ಲವಲ್ಲ. ಕೆಲಸಕ್ಕೆ ಹೋಗಲಿಕ್ಕೆ ಶುರುಮಾಡಿದ ಮೇಲೆ ನೀನೂ ಮೆಂಬರು. ಈ ವರ್ಷ ಶಾಲೆಗೆ ಬಾ. ಯುನೂನಿಯನ್ ಶಾಲೆಗೆ ಕಲೀಲಿಕ್ಕೆ, ಬರ್ತೀಯೊ? ಕಿಟ್ಟು: ಓ! (ರಾಮಣ್ಣ-ರುಕ್ಕು ಸಂತೋಷದಿಂದ ಪರಸ್ಪರ ದೃಷ್ಟಿ ವಿನಿಮಯ ಮಾಡಿಕೊಳ್ಳುವರು)
ಕಾರ್ಯದರ್ಶಿ: ಇನ್ನು ನಾನು ಚಂದಾ ವಸೂಲಿಗೆ ಬರಲಿಕ್ಕಿಲ್ಲ. ನೀವೇ ತಂದುಕೊಡಬೇಕು. (ರಶೀದಿ ಬರೆಯುತ್ತ) ಈ ಸಲದ ರಶೀದಿ ಇಲ್ಲಿಯೇ ಕೊಡ್ತೇನೆ.
ರಾಮಣ್ಣ : ಇನ್ನೇನು-ಇನ್ನೊಂದು ವಾರ ಬಿಟ್ಟು ನಾನೂ ಕೆಲಸಲಕ್ಕೆ ಬರುವವನೇ!
ಆದಂ : ನಾಡ್ದು ಮಿಟಿಂಗಿಂದೂ ಹೇಳಿಬಿಡಿ.
ಕಾರ್ಯದರ್ಶಿ: ಹಾಂ..ಮಂಗಳವಾರ ಸಾಯಂಕಾಲ ದೊಡ್ಡ ಮೈದಾನಿ ನಲ್ಲಿ ಭಾರಿ ದೊಡ್ಡ ಸಭೆ ಉಂಟು....ರಷ್ಯಾದ ಕ್ರಾಂತಿ ದಿನದ ಆಚರಣೆ. (ರಾಮಣ್ಣನತ್ತ ನೋಡಿ)