೧೧೭
ಯಶೋಧರ ಚರಿತೆ
ಅಭಯರುಚಿಕುಮಾರಂ ಮಾರಿದತ್ತಂಗೆ ಹಿಂಸಾ-
ರಭಸಮತಿಗೆ ಸಯ್ಪಂ ಪೇಳ್ದ ಧರ್ಮಕ್ಕೆ ತಂದೀ
ಶುಭಕಥನಮನತ್ಯಾನಂದದಿಂ ಕೇಳ್ವ ಭವ್ಯ
ಪ್ರಭು ಸಭೆಗೆಸೆದಿರ್ಕುಂ ಮಂಗಳಂ ಶ್ರೀ ವಿಲಾಸಂ 85
ಶ್ರೀಗಿರಿದುರ್ಗಮಲ್ಲನೃಪರಾಜ್ಯದ ವತ್ಸರಮುತ್ತರೋತ್ತರ-
ಕ್ಕಾಗಿರೆ ಶುಕ್ಲದಾಶ್ವಯುಜಕೃಷ್ಣದ ಪಂಚಮಿ ಪುಷ್ಯತಾರೆ ಪೂ-
ರ್ಣಾ ಗುರುವಾಗೆ ಭೂಸತಳದೊಳೀ ಕೃತಿ ಪೆತ್ತುದು ಸುಪ್ರತಿಷ್ಠಯಂ
ಚಾಗದ ಭೋಗದಗ್ಗಳಿಕೆಯಂ ಮೆಳೆಂದಂ ಕವಿಭಾಳಲೋಚನಂ 86
ಪರಮಜಿನೇಂದ್ರ ಶಾಸನವಸಂತದೊಳೀ ಕೃತಿ ಕೋಕಿಲಸ್ವನಂ
ಪರೆಗಸಹಾಯಶೂರನ ಭುಜಕ್ಕೆ ಜಯಂ ಸಮಸಲ್ಗೆ ಸಂತತಂ
ಪರಿಮಳದಂತೆ ವಾಣಿ ನೆಲಸಿರ್ಕೆ ವಿಕಾಸವಿಲಾಸದಂತೆವೊಲ್
ಸಿರಿ ನೆರೆದಿರ್ಕೆ ನಾಳ್ಪ್ರಭು ಜನಾರ್ಧನದೇವನ ವಕ್ತ್ರಪದ್ಮದೊಳ್ 87
_____
85. ಹಿಂಸೆಯಲ್ಲೇ ಮನಸ್ಸು ಮುಂದಾಗುತ್ತಿದ್ದ ಮಾರಿದತ್ತನಿಗೆ ಅಭಯರುಚಿ ಕುಮಾರನು ಪುಣ್ಯದ ವಿಷಯವನ್ನು ಹೇಳಿ ಅವನನ್ನು ಧರ್ಮದ ದಾರಿಗೆ ತಂದನು. ಇಂತಹ ಈ ಮಂಗಲಕರವಾದ ಕಥೆಯನ್ನು ಅತ್ಯಾನಂದದಿಂದ ಕೇಳುವ ಭವ್ಯಪ್ರಭು ಸಭೆಗೆ ಮಂಗಲಕರವಾದ ಸಂಪದ್ವಿಲಾಸವು ಶೋಭಿಸುತ್ತದೆ. 86. ಶ್ರೀ ಗಿರಿದುರ್ಗ ಮಲ್ಲರಾಜನ ರಾಜ್ಯದ ವತ್ಸರವು ಉತ್ತರೋತ್ತರ ಉತ್ಕರ್ಷಕ್ಕಾಗಿ ಇರುವಾಗ ಶುಕ್ಲ ಸಂವತ್ಸರದ ಆಶ್ವೀಜ ಕೃಷ್ಣಪಂಚಮಿ ಪುಷ್ಯ ನಕ್ಷತ್ರದ ಗುರುವಾರ ಈ ಕೃತಿ ಒಳ್ಳೆಯ ಪ್ರತಿಷ್ಠೆಯನ್ನು ಪಡೆಯಿತು. ಈ ಲೋಕದಲ್ಲಿ ತ್ಯಾಗದ ಭೋಗದ ಅಗ್ಗಳಿಕೆಯನ್ನು ಕವಿಭಾಳಲೋಚನನು ಮೆರೆದನು. 87. ಶ್ರೇಷ್ಠನಾದ ಜಿನೇಂದ್ರನ ಶಾಸನ (ಧರ್ಮ)ವೆಂಬ ವಸಂತದಲ್ಲಿ ಈ ಕಾವ್ಯವೆಂಬ ಕೋಗಿಲೆಯ ಧ್ವನಿ ಪಸರಿಸಲಿ! ಅಸಹಾಯ ಶೂರನ(ಬಲ್ಲಾಳನ) ಬಾಹುವಿಗೆ ಜಯವೊದಗಲಿ! ನಾಡೊಡೆಯನಾದ ಜನಾರ್ದನ ದೇವ (ಜನ್ನ)ನ ಮುಖ ಕಮಲದಲ್ಲಿ ಯಾವಾಗಲೂ ಸರಸ್ವತಿಯು ಪರಿಮಳದಂತೆ ನೆಲಸಿರಲಿ! ವಿಕಾಸದ ಚೆಲುವಿನಂತೆ ಲಕ್ಷ್ಮಿ ಸೇರಿಕೊಂಡಿರಲಿ!