Pages   (key to Page Status)   


ಭಕ್ತ
ಭೃತ್ಯನಾಗಿ ಮಾಡುವ ಮಾಟದಲ್ಲಿ ವಿಚಾರವುಂಟಯ್ಯಾ
ಅದೆಂತೆಂದರೆ:ಸಂಸಾರಚ್ಛೇದನೆಯುಳ್ಳರೆ ಜಂಗಮಲಿಂಗವಹುದು
ಅದಕ್ಕೆ ಮಾಡಿದ ಫಲಂ ನಾಸ್ತಿ. ಸಂಸಾರಚ್ಛೇದನೆ ಇಲ್ಲದಿದ್ದರೆ ಆ ಜಂಗಮ ಭವಭಾರಿಯಹನು. ಅದಕ್ಕೆ ಮಾಡಿದಲ್ಲಿ ಫಲವುಂಟು. ಫಲವುಂಟಾದಲ್ಲಿ ಭವ ಉಂಟು
ಫಲವಿಲ್ಲದಲ್ಲಿ ಭವವಿಲ್ಲ. `ಮನದಂತೆ ಮಂಗಳ' ಎಂಬ ಶ್ರುತಿಯ ದಿಟವ ಮಾಡಿ
ಈ ಉಭಯದೊಳಗೆ ಆವುದ ಪ್ರಿಯವಾಗಿ ಮಾಡುವರು ಅಹಂಗೆ ಇಹರು ಕಾಣಾ ಕೂಡಲಚೆನ್ನಸಂಗಮದೇವಾ