ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ,



Pages   (key to Page Status)   


ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ
ಆನೇವೆನಯ್ಯಾ ? ಹಸಿದುಂಡಡೆ ಉಂಡು ಹಸಿವಾಯಿತ್ತು. ಇಂದು ನೀನೊಲಿದೆಯಾಗಿ
ಎನಗೆ ಅಮೃತದ ಆಪ್ಯಾಯನವಾಯಿತ್ತು. ಇದು ಕಾರಣ
ನೀನಿಕ್ಕಿದ ಮಾಯೆಯನಿನ್ನು ಮುಟ್ಟಿದೆನಾದಡೆ ಆಣೆ
ನಿಮ್ಮಾಣೆ ಚೆನ್ನಮಲ್ಲಿಕಾರ್ಜುನಾ.