ಮುಕ್ತಿಗೆ ಮುಖವಾಗಿ ಯುಕ್ತಿಗೆ



Pages   (key to Page Status)   


ಮುಕ್ತಿಗೆ ಮುಖವಾಗಿ ಯುಕ್ತಿಗೆ ಹೊರಗಾಗಿ ಅರಿವಿಂಗೆ ಅರಿವಾಗಿಪ್ಪ ಭೇದ ಕಾಣಬಂದಿತ್ತು ನೋಡಾ ! ಅರಿವರಿತು ಮರಹು ನಷ್ಟವಾಗಿಪ್ಪುದು ನಿನ್ನಲ್ಲಿ ಸನ್ನಹಿತವಾಗಿತ್ತು. ಗುಹೇಶ್ವರನ ಶರಣ ಅಜಗಣ್ಣನ ನಿಲವು ಬಯಲ ಬೆರಸಿದ ಮರೀಚಿಯಂತಾಯಿತ್ತು
ಬೆರಸಿ ನೋಡಾ ಬೇರಿಲ್ಲದೆ !