ಯಾರು ಒಲಿದರೇನು? ಸಂಪಾದಿಸಿ

ರಾಗ: ಆನಂದಭೈರವಿ, ತಾಳ: ಆದಿ;

                                           
ಯಾರು ಒಲಿದರೇನು ನಮಗಿ-ನ್ನಾರು ಮುನಿದರೇನು
ಕ್ಷೀರಸಾಗರಶಾಯಿಯಾದವನ ಸೇರಿದಂಥ ಹರಿದಾಸರಿಗೆ || ಪಲ್ಲವಿ||

ಊರನಾಳುವ ದೊರೆಗಳು ನಮ್ಮನು ದೂರ ಅಟ್ಟಿದರೇನು
ಘೋರಾರಣ್ಯದಿ ತಿರುಗುವ ಮೃಗಗಳು ಅಡ್ಡಗಟ್ಟಿದರೇನು
ಮಾರಿಹಿಂಡು ಮತ್ತೆ ಮುಸುಕಿನ ದಂಡು ಮೈಗೆ ಮುತ್ತಿದರೇನು
ವಾರಿಜನಾಭನ ವಸುದೇವಸುತನ ಸಾರುವಂಥ ಹರಿದಾಸರಿಗೆ |೧ ||

ಪಡೆದ ತಾಯಿ ತಂದೆ ನಮ್ಮೊಳು ಅಹಿತ ಮಾಡಿದರೇನು
ಮಡದಿ ಮಕ್ಕಳು ಮನೆಯ ನೆಂಟರು ಮುನಿಸುಗುಟ್ಟಿದರೇನು
ಒಡನಾಡುವ ಗೆಳೆಯರು ನಮ್ಮೊಳು ವೈರವ ಬೆಳೆಸಿದರೇನು
ಕಡಲಶಯನ ಕರುಣಾನಿಧಿ ನಾಮವು ಒಡಲೊಳಗಿಹ ಹರಿದಾಸರಿಗೆ || ೨ ||

ಕಾನನದೊಳ್ಹರಿದಾಡುವ ಸರ್ಪವು ಕಾಲಿಗೆ ಸುತ್ತಿದರೇನು
ಜೇನಿನಂದದಿ ಕೀಟ ಕ್ರಿಮಿಗಳು ಚರ್ಮಕೆ ಮುತ್ತಿದರೇನು
ಭಾನುನಂದನ ಬುಧ ಮಂಗಳರಾ ಬಲವು ತಪ್ಪಿದರೇನು
ದೀನನಾಥ ಶ್ರೀ ಪುರಂದರವಿಠಲನ ಧ್ಯಾನವುಳ್ಳ ಹರಿದಾಸರಿಗೆ || ೩ ||[೧]
ರಚನೆ : ಪುರಂದರದಾಸರು.

ನೋಡಿ ಸಂಪಾದಿಸಿ

ಪರಿವಿಡಿ ಸಂಪಾದಿಸಿ

ಕನ್ನಡ ವಿಕಿಸೋರ್ಸ್ ಸಂಪಾದಿಸಿ

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ ಸಂಪಾದಿಸಿ

  1. ದಾಸವಾಣಿ