Pages   (key to Page Status)   


ವೇದ ದೈವವೆಂದು ನುಡಿವರು
ಶಾಸ್ತ್ರ ದೈವವೆಂದು ನುಡಿವರು
ಪುರಾಣ ದೈವವೆಂದು ನುಡಿವರು
ಕಲ್ಲು ದೈವವೆಂದು ನುಡಿವರು
ಕಾಷ* ದೈವವೆಂದು ನುಡಿವರು
ಪಂಚಲೋಹ ದೈವವೆಂದು ನುಡಿವರು
ಇವರೆಲ್ಲ ಸಕಲದಲಾದ ಸಂದೇಹವನೆ ಪೂಜಿಸಿ ಸತ್ತು ಹೋದರಲ್ಲಾ ! ಸಮಸ್ತ ಪ್ರಾಣಿಗಳೂ_ತಾಯನರಿಯದ ತರ್ಕಿಗಳು
ತಂದೆಯನರಿಯದ ಸಂದೇಹಿಗಳು. ತನು ಪೃಥ್ವಿಯಿಂದಲಾಯಿತ್ತು ಮನ ವಾಯುವಿನಿಂದಲಾಯಿತ್ತು. ಕಲ್ಲು ಕಾಷ* ಸಕಲ_ನಿಷ್ಕಲದಿಂದಲಾಯಿತ್ತು. ವಾಯುವಾಧಾರದ ಪವನಸಂಯೋಗದ ಅನಾಹತ ಚಕ್ರದಿಂದ ಮೇಲಣ ಆಜ್ಞಾಚಕ್ರದಲ್ಲಿ ನಿಂದು; ಅನಂತಕೋಟಿಬ್ರಹ್ಮಾಂಡಗಳ ಮೆಟ್ಟಿ_ ಕಾಯದ ಕಣ್ಣ ಮುಚ್ಚಿ
ಜ್ಞಾನದ ಕಣ್ಣ ತೆರೆದು ನೋಡಲ್ಕೆ
ಅಲ್ಲಿ ಒಂದು ನಿರಾಕಾರ ಉಂಟು. ಆ ನಿರಾಕಾರದಲ್ಲಿ ನಿಂದು ನಿರ್ಣಯಿಸಿ ನೋಡಲ್ಕೆ
ಅಲ್ಲಿ ಒಂದು ನಿಶ್ಶೂನ್ಯವುಂಟು. ಆ ನಿಶ್ಶೂನ್ಯದಲ್ಲಿ ನಿಂದು ನಿಶ್ಚಯಿಸಿ ನೋಡಲ್ಕೆ
ಕತ್ತಲೆಯಲ್ಲ ಬೆಳಗಲ್ಲ ಬಚ್ಚಬರಿಯ ಬಯಲು ಗುಹೇಶ್ವರಾ !