ಶಿವಶಿವಾಯೆಂಬುದು ಭವದುರಿತದೋಟ ಕಂಡಯ್ಯ.



Pages   (key to Page Status)   


ಶಿವಶಿವಾಯೆಂಬುದು ಭವದುರಿತದೋಟ ಕಂಡಯ್ಯ. ಹರಹರಯೆಂಬುದು ಹರಣದ ತೊಡಕಿನ ಮರಣವ ಪರಿಹರಿಸುವುದು ನೋಡಾ. ಇದು ಕಾರಣ
ನಡೆವುತ್ತ ನುಡಿವುತ್ತ ಸರ್ವಾವಸ್ಥೆಯಲ್ಲಿಯು `ಓಂ ನಮಃಶಿವಾಯ ಓಂ ನಮಃಶಿವಾಯ ಓಂ ನಮಃಶಿವಾಯ' ಎಂಬ ಪ್ರಣವ ಪಂಚಾಕ್ಷರಿಯನೆ ಸ್ಮರಿಸುತಿರ್ದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.