Pages   (key to Page Status)   


ಶ್ವೇತ ಪೀತ ಕಪೋತ ಹರಿತ ಕೃಷ್ಣ ಮಾಣಿಕವೆಂಬ ಆರು ವರ್ಣ. ಅದಕ್ಕೆ ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಶ್ರೀಗುರು_ಎಂಬ ಆದು ಅಧಿದೇವತೆ
ಈ ಭೇದವನೆಲ್ಲ ತಿಳಿದು ನೋಡಿ
ಉನ್ಮನಿಯ ಜ್ಯೋತಿಯ ಬ್ರಹ್ಮರಂಧ್ರದ ಸಹಸ್ರದಳ ಪದ್ಮದ ಅಮೃತಬಿಂದುವಿನೊಳಗಣ ಪ್ರಾಣವೆ ರೂಪಾಗಿ
ಪ್ರಾಣಲಿಂಗದಲ್ಲಿ ಒಡಗೂಡಬಲ್ಲ ಗುಹೇಶ್ವರಾ ನಿಮ್ಮ ಶರಣ.