ಹಸಿವುಳ್ಳನ್ನಕ್ಕ ವ್ಯಾಪಾರ ಬಿಡದು,



Pages   (key to Page Status)   


ಹಸಿವುಳ್ಳನ್ನಕ್ಕ ವ್ಯಾಪಾರ ಬಿಡದು
ಸೀತ ಉಳ್ಳನ್ನಕ್ಕ ಉಪಾಧಿಕೆ ಬಿಡದು
ಮಾತುಳ್ಳನ್ನಕ್ಕ ಬೂಟಾಟಿಕೆ ಬಿಡದು
ನಿದ್ರೆಯುಳ್ಳನ್ನಕ್ಕ ಸತಿಯ ಸಂಗ ಬಿಡದು. ಇದು ಕಾರಣ_ ಕ್ಷುತ್ತಿಂಗೆ ಭಿಕ್ಷೆ
ಸೀತಕ್ಕೆ ರಗಟೆ
ಮಾತಿಂಗೆ ಮಂತ್ರ
ಶಯನಕ್ಕೆ ಶಿವಧ್ಯಾನವೆಂದು ಹೇಳಿಕೊಟ್ಟ ಗುರುವಚನವ ಮೀರಿ ನಡೆವವರಿಗೆ ಪರದಲ್ಲಿ ಪರಿಣಾಮ ದೊರೆಕೊಳ್ಳದು ನೋಡಾ. ಇದು ಕಾರಣ_ ಗುರುವಾಜ್ಞೆಯ ಮೀರಿ ಮನಕ್ಕೆ ಬಂದಂತೆ ನಡೆವವರ ಎನಗೊಮ್ಮೆ ತೋರದಿರಾ ಗುಹೇಶ್ವರಾ.