Pages   (key to Page Status)   


ಹಸಿವು ಹರಿದು
ತೃಷೆ ಬತ್ತಿ
ಪರಿಣಾಮವೆ ಪಥ್ಯವಾಗಿ ನಿಂದಂಗ ನೀನಾದ ಕಾರಣ
ನಿನ್ನ ಕಾರುಣ್ಯಚಕ್ಷು ಎನ್ನ ನಿರೀಕ್ಷಿಸಿದಲ್ಲಿ
ಎನ್ನ ಬಂಧ ಮೋಕ್ಷವೆಂಬುವು ಅಂದೆ ನಿಂದವು. ಕೂಡಲಚೆನ್ನಸಂಗಮದೇವರಲ್ಲಿ ಪ್ರಭುದೇವರ ಸುಳುಹು ಗೋಪ್ಯವಾಯಿತ್ತು.