Pages   (key to Page Status)   


ಹಿಂದಣ ಜನ್ಮದಲ್ಲಿ ಗುರುಲಿಂಗಜಂಗಮವ ಶಿವನೆಂದರಿದು ನಂಬಿ ಪೂಜಿಸಿದ ಕಾರಣ ಮುಂದೆ ಹುಟ್ಟುವನು ಸತ್ಕುಲಜ ಬಲವಂತನಾಗಿ
ಧನಧಾನ್ಯ ಸಕಲ ಭೋಗೈಶ್ವರ್ಯ ಉಳ್ಳವನಾಗಿ
ಸಕಲಲೋಕಕ್ಕೆ ಮನ್ನಣೆ ಉಳ್ಳವನಾಗಿ
ವಿದ್ಯೆಬುದ್ಧಿಯಲ್ಲಿ ವಿಶೇಷನಾಗಿ
ಸತ್ಯ ಸದಾಚಾರ ಭಕ್ತಿಜ್ಞಾನ ಉಳ್ಳವನಾಗಿ
ನಮ್ಮ ಅಖಂಡೇಶ್ವರನ ಪೂರ್ಣ ಒಲುಮೆ ಉಳ್ಳವನಾಗಿರ್ಪನು ನೋಡಿರೋ.