ಹಿತವಿದೆ ಸಕಲಲೋಕದ ಜನಕ್ಕೆ,



Pages   (key to Page Status)   


ಹಿತವಿದೆ ಸಕಲಲೋಕದ ಜನಕ್ಕೆ
ಮತವಿದೆ ಶ್ರುತಿಪುರಾಣಾಗಮದ
ಗತಿಯಿದೆ
ಭಕುತಿಯ ಬೆಳಗಿನುನ್ನತಿಯಿದೆ. ಶ್ರೀ ವಿಭೂತಿಯ ಧರಿಸಿದಡೆ ಭವವ ಪರಿವುದು ದುರಿತಸಂಕುಳವನೊರಸುವುದು ಹರನ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯದಲ್ಲಿರಿಸುವುದು. ನಿರುತವಿದು ನಂಬು ಮನುಜಾ
ಜನನಭೀತಿ ಈ ವಿಭೂತಿ. ಮರಣಭಯದಿಂದ ಅಗಸ್ತ್ಯ ಕಾಶ್ಯಪ ಜಮದಗ್ನಿಗಳು ಧರಿಸಿದರಂದು ನೋಡಾ. ಶ್ರೀಶೈಲ ಚೆನ್ನಮಲ್ಲಿಕಾರ್ಜುನನ ಒಲಿವ ವಿಭೂತಿ.